ಉಡುಪಿ ; ಆಳ್ವಾಸ್ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹೆಗ್ಡೆ ಕಾಂಪ್ಲೆಕ್ಸ್ ಜೈನ್ ಪೇಟೆ ಮುಂಡ್ಕೂರಿನಲ್ಲಿ ಕೋವಿಡ್ ಕೆರ್ ಸೆಂಟರಿಗೆ ಚಾಲನೆ ನೀಡಲಾಯಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾಕ್ಟರ್ ಮೋಹನ್ ಆಳ್ವಾರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕೋರೋನದಿಂದ ಜನರು ತತ್ತರಿಸಿ ಹೋಗಿದ್ದಾರೆ. ಕೊರೋನಕ್ಕೆ ಭಯಪಡುವ ಅವಶ್ಯಕತೆ ಇಲ್ಲ. ಯಾವುದು ರೋಗ ಲಕ್ಷಣ ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳಿ ಭಯಪಡುವ ಅವಶ್ಯಕತೆಯಿಲ್ಲ .ಮುಂಡ್ಕೂರು ಗ್ರಾಮದ ಸಾರ್ವಜನಿಕರಿಗೆ ಕೋವಿಡ್ ೧೯ ಉಚಿತ ವೈದ್ಯಕೀಯ ಸೇವೆಯನ್ನು ಆಳ್ವಾಸ್ ಪ್ರಾರ್ಥಮಿಕ ಕೇಂದ್ರದಲ್ಲಿ ಸಿಗಲಿದೆ ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಸಂಚಾಲಕ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ರೇಷ್ಮಾ ಉದಯ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಗೋಪಾಲ್ ಮೂಲ್ಯ, ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಭಾಸ್ಕರ್ ಶೆಟ್ಟಿ ಅಳ್ವಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಸುಜಿತ್ ಎಂ, ಹೆಗ್ಡೆ ಕಾಂಪ್ಲೆಕ್ಸಿನ ಮಾಲೀಕರಾದ ಉದಯ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ, ಸಾಯಿನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ವರದಿ ; ಅರುಣ ಭಟ್, ಕಾರ್ಕಳ
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ