ಭಟ್ಕಳ: ಮಾಜಿ ಸಚಿವ ಆರ್.ವಿ.ದೇಶಪಾಂಡೆಯವರು ಪರ್ತಕರ್ತರಿಗೆ ನೀಡಿದ ಆರೋಗ್ಯ ಕಿಟನ್ನು ಗುರುವಾರ ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಣ ಸಂತೋಷ ನಾಯ್ಕ ತಾಲ್ಲೂಕಾ ಪತ್ರಕರ್ತರಿಗೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತಾನಾಡಿದ ಅವರು ಕರ್ನಾಟಕ ಕಾರ್ಯನಿರತ ಪರ್ತಕರ್ತ ಸಂಘದ ಜಿಲ್ಲಾ ಅಧ್ಯಕ್ಣ ರಾಧಕೃಷ್ಣ ಭಟ್ ಕೋರಿಗೆ ಮೇರೆಗ ದೇಶಪಾಂಡೆಯವರು ಜಿಲ್ಲೆಯ ೨೫೦ಪತ್ರಕರ್ತರಿಗೆ ಅರೋಗ್ಯ ಕಿಟ್ ನೀಡಿದ್ದಾರೆ. ಕರೋನಾ ಸಂಕಷ್ಟ ಕಾಲದಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ ಪತ್ರಕರ್ತರಿಗೆ ಸರ್ಕಾರ ಯಾವುದೇ ಪ್ಯಾಕೇಜ್ ಘೋಷಣೆ ಮಾಡದೇ ಕಡೆಗಣಿಸಿರುವ ಬಗ್ಗೆ ಖಂಡಿಸಿದ ಅವರು ಮುಖ್ಯಮಂತ್ರಿಗಳು ಕೂಡಲೇ ಪತ್ರಕರ್ತರಿಗೆ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿದರು. ಕೋವಿಡ್ ನಲ್ಲಿ ಮರಣ ಹೊಂದಿದ ಬಡ ಕುಟುಂಬಗಳಿಗೆ ಪ್ರಕೃತಿ ವಿಕೋಪದಡಿ ೪ ಲಕ್ಷ ಪರಿಹಾರ ನೀಡಲು ಅವಕಾಶವಿದ್ದರೂ ಸರ್ಕಾರ ೧ ಲಕ್ಷ ಘೋಷಣೆ ಮಾಡಿರುವುದು ಹಾಸ್ಯಾಸ್ಪದ ಎಂದು ತಿಳಿಸಿದರು.. ಕಾಂಗ್ರೇಸ್ ಅಲ್ಪಸಂಖ್ಯಾತ ಜಿಲ್ಲಾ ಅಧ್ಯಕ್ಷ ಅಬ್ದುಲ್ ಮಜೀದ್, ಕಾಂಗ್ರೇಸ್ ಮುಖಂಡ ಸತೀಶ ಅಚಾರಿ ಇದ್ದರು.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.