ಭಟ್ಕಳ: ಕಳೆದ ಎರಡು ವರ್ಷಗಳಿಂದ ಇಲ್ಲಿನ ತಾಲೂಕಾ ಆಸ್ಪತ್ರೆಯಲ್ಲಿ ದಕ್ಷತೆಯಿಂದ ಕರ್ತವ್ಯವನ್ನು ನಿರ್ವಹಿಸುತ್ತಾ ಬಂದಿದ್ದ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಅವರ ೫೦ನೇ ಹುಟ್ಟುಹಬ್ಬವನ್ನು ಸಾರ್ವಜನಿಕರು, ಆಸ್ಪತ್ರೆಯ ಹಿತೈಷಿಗಳು ಡಾ. ಸವಿತಾ ಕಾಮತ್ರಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಸಂತಸವನ್ನು ಹಂಚಿಕೊAಡ ಡಾ.ಸವಿತಾ ಕಾಮತ್ ಅವರು ತನ್ನ ಹುಟ್ಟುಹಬ್ಬದಂದೇ ಆಸ್ಪತ್ರೆಯ ಲಸಿಕಾಕರಣದ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭವನ್ನು ನಡೆಸುತ್ತಿರುವುದು ಸಂತಸ ತಂದಿದೆ. ನಾಗಯಕ್ಷೆ ಚಾರಿಟೇಬಲ್ ಟ್ರಷ್ಟನಿಂದ ನಿರ್ಮಾಣವಾಗುವ ಕಟ್ಟಡಕ್ಕೆ ತಮ್ಮ ಎರಡು ತಿಂಗಳ ಸಂಬಳವನ್ನು ದೇಣಿಗೆಯಾಗಿ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಸುನಿಲ್ ನಾಯ್ಕ, ಪ್ರಮುಖರಾದ ನರೇಂದ್ರ ನಾಯಕ್, ರಾಮದಾಸ ಪ್ರಭು, ಶ್ರೀಕಾಂತ ನಾಯ್ಕ, ಮಹೇಂದ್ರ ನಾಯ್ಕ, ಈಶ್ವರ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
More Stories
ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ ನಲ್ಲಿ ಉತ್ತಮ ಹೆಸರು ಗಳಿಸಿದ ಅಂಜುಮನ್ ಇಂಜಿನಿಯರಿ0ಗ್ ವಿದ್ಯಾರ್ಥಿಗಳು
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ