ಭಟ್ಕಳ: ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಪಡಿಸಿದ್ದಲ್ಲದೇ, ಜಾತಿ ಹೆಸರನ್ನು ಹೇಳಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿರುವ ಬಗ್ಗೆ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ತಾಲೂಕಿನ ಹೆಬಳೆ ಗಾಂಧಿನಗರದ ಜಗದೀಶ ವಾಸು ಮೊಗೇರ ಹಾಗೂ ಇಲ್ಲಿನ ಹುರುಳಿಸಾಲ ನಿವಾಸಿ ಈಶ್ವರ ಯಾನೆ ಸಣ್ಣತಮ್ಮ ರಾಮಾ ನಾಯ್ಕ ಎಂದು ಗುರುತಿಸಲಾಗಿದೆ. ಇವರು ದಿನೇಶ ಗೊಂಡ ಹಾಗೂ ಮಾದೇವ ಗೊಂಡ ಇವರುಗಳಿಗೆ ಹೊಡೆದಿದ್ದಲ್ಲದೇ, ದಿನೇಶ ರಾಮಾ ಗೊಂಡ ಈತನ ಬೆನ್ನಿಗೆ ಆರೋಪಿ ಈಶ್ವರ ಯಾನೆ ಸಣ್ಣತಮ್ಮ ರಾಮಾ ನಾಯ್ಕ ಈತನು ಚಾಕುವಿನಿಂದ ಜೋರಾಗಿ ಇರಿದು ಗಾಯಗೊಳಿಸಿರುವುದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಎಸೈ ಭರತ್ ತನಿಖೆ ಕೈಗೊಂಡಿದ್ದಾರೆ.
More Stories
ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ ನಲ್ಲಿ ಉತ್ತಮ ಹೆಸರು ಗಳಿಸಿದ ಅಂಜುಮನ್ ಇಂಜಿನಿಯರಿ0ಗ್ ವಿದ್ಯಾರ್ಥಿಗಳು
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ