ಮುರುಡೇಶ್ವರದ ಆರ್. ಎನ್. ಶೆಟ್ಟಿ ಟ್ರಸ್ಟಿನ ಆಡಳಿತಕ್ಕೊಳಪಟ್ಟ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ ಫಲಿತಾಂಶವನ್ನು ಗಳಿಸಿ ಸಾಧನೆ ಮಾಡಿದ್ದಾರೆ.
ಪರೀಕ್ಷೆಗೆ ಹಾಜರಾದ ೪೯ ವಿದ್ಯಾರ್ಥಿಗಳಲ್ಲಿ ೧೬ ವಿದ್ಯಾರ್ಥಿಗಳು ೯೦% ಕ್ಕಿಂತಲೂ ಅಧಿಕ ಅಂಕ ಗಳಿಸಿದ್ದಾರೆ, ೩೧ ವಿದ್ಯಾರ್ಥಿಗಳು ಉನ್ನತ ಶ್ರೇಣಿ (ಡಿಸ್ಟಿಂಗಶನ್), ೨೪ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ. ಕು. ಕೀರ್ತಿ ಉದಯ್ ಪಾಟೀಲ್ ೯೭.೨೮% ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾಳೆ, ಕು. ಸಂದೇಶ್ ಜಗದೀಶ ಶೆಟ್ಟಿ ೯೬.೬೪% ದ್ವಿತೀಯ ಸ್ಥಾನ ಮತ್ತು ಕು. ದಿಶಾ ರಾಜೇಶ್ ಹರಿಕಾಂತ್ ೯೬.೩೬% ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ವಿದ್ಯಾ ಸಂಸ್ಥೆಯ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಶಿಕ್ಷಕ, ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.
More Stories
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ:
ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ: