ಶಿರಸಿಯಲ್ಲಿರುವ ವಿಭಾಗೀಯ ಆರ್ಟಿಓ ಕಛೇರಿಯ ಕೆರೆಯ ದಡದಲ್ಲಿರುವ ಈ ಸ್ಥಳಕ್ಕೆ ಲೈಸೆನ್ಸ್ ಪಡೆಯಲು ಬರುವ ಚಾಲಕರು ಚಾಲನೆಯ ಟ್ರಯಲ್ ಕೊಡುವಾಗ ಕೆರೆಯ ಸಮೀಪವೇ ವಾಹನಗಳನ್ನು ಚಲಾಯಿಸುವದು ಕಡ್ಡಾಯವಾಗಿದೆ . ಗುರುವಾರ ಸಿದ್ಧಾಪುರದಿಂದ ನವೀನ ಎನ್ನುವವರು ಕಾರಿನ ಲೈಸೆನ್ಸ್ ಗಾಗಿ ಶಿರಸಿಯ ಆರ್ಟಿಓ ಕಛೇರಿಗೆ ಬಂದಿದ್ದರು. ನಿಯಮಾನುಸಾರ ಚಾಲನಾ ಟ್ರಯಲ್ ಕೊಡುವ ವೇಳೆ ನಿಯಂತ್ರಣ ತಪ್ಪಿ ಕಛೇರಿಯ ಎದುರಿನಲ್ಲಿ ನೀರುತುಂಬಿದ ಕೆರೆಗೆ ಕಾರು ಸಮೇತ ಬಿದ್ದಿದ್ದರು ತಕ್ಷಣ ಶಿರಸಿಯ ನಿಸರ್ಗ ಸ್ಟುಡಿಯೋ ಮಾಲೀಕರಾದ ಅಕ್ಷಯ ನಾಯ್ಕ ಇವರು ನೀರಿಗೆ ಧುಮುಕಿ ಚಾಲಕನನ್ನು ರಕ್ಷಿಸಿ .ಮಾನವೀಯತೆಯನ್ನು ಮೆರೆದಿದ್ದಾರೆ. ಹಾಗೂ ನಂತರ ಕ್ರೇನ್ ಮೂಲಕ ಕಾರನ್ನು ನೀರಿನಿಂದ ಎತ್ತಲಾಯಿತು. ಅಕ್ಷಯ ನಾಯ್ಕ ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.