ವರದಿ: ವೇಣುಗೋಪಾಲ ಮದ್ಗುಣಿ. ಯಲ್ಲಾಪುರ
ಶಿರಸಿ : ಬಿಜೆಪಿ ಗ್ರಾಮೀಣ ಮತ್ತು ನಗರ ಮಂಡಳದ ವತಿಯಿಂದ ಬಿಸ್ಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ” ನೂತನ ಕೃಷಿ ಕಾಯ್ದೆ ಸತ್ಯ – ಮಿಥ್ಯೆ ” ಜಾಗೃತಿ ಕಾರ್ಯಾಗಾರವನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ದೇಶದ ರೈತರ ಸಬಲೀಕರಣಕ್ಕಾಗಿ ಕೇಂದ್ರ ಸರಕಾರ ನೂತನ ಕೃಷಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ, ವಿರೋಧ ಪಕ್ಷದವರು ಕೃಷಿ ಕಾಯ್ದೆಗಳ ಕುರಿತು ಯಾವುದೇ ಮಾಹಿತಿ ಇಲ್ಲದೆ ಅಪಪ್ರಚಾರ ಮಾಡುತ್ತಿದ್ದಾರೆ, ಪಕ್ಷದ ಕಾರ್ಯಕರ್ತರು ಈ ಕಾಯ್ದೆಯ ಸತ್ಯಾಂಶಗಳ ಬಗ್ಗೆ ರೈತರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್.ಪಾಟೀಲ ,ಗ್ರಾಮೀಣ ಮಂಡಲಾಧ್ಯಕ್ಷರಾದ ಎನ್.ವಿ.ಹೆಗಡೆ,ರಾಜ್ಯ ರೈತಮೋರ್ಚಾ ಕಾರ್ಯದರ್ಶಿಗಳಾದ ಪ್ರಸನ್ನಕುಮಾರ ಕೆರೆಕೈ, ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾದ ಮಹೇಶ ಹೊಸಕೊಪ್ಪ,ರೈತಮೋರ್ಚ ಜಿಲ್ಲಾ ಪ್ರದಾನಕಾರ್ಯದರ್ಶಿಗಳಾದ ಪ್ರೇಮಕುಮಾರ ನಾಯ್ಕ, ವಿಷ್ಣುಮೂರ್ತಿ ಹೆಗಡೆ, ರೈತ ಮೋರ್ಚಾ ಜಿಲ್ಲಾ ಪ್ರಭಾರಿಗಳಾದ ಗೋಪಾಲಕೃಷ್ಣ ವೈದ್ಯ,ಬಿಜೆಪಿ ಜಿಲ್ಲಾ ಪ್ರದಾನಕಾರ್ಯದರ್ಶಿ ಚಂದ್ರು ಏಸಳೆ, ಹಾಗೂ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
More Stories
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ