ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹೊನ್ನಾವರ ಬಿಜೆಪಿ ವತಿಯಿಂದ ಹೊನ್ನಾವರ ಪಟ್ಟಣದ ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ ೭೧ ದೀಪ ಬೆಳಗಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕೊರೊನಾ ಯೋಧರಾಗಿರುವ ತಾಲೂಕಿನ ಅಂಬುಲೆನ್ಸ್ ಚಾಲಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ನಂತರ ದೇವರ ಪ್ರಸಾದ, ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ಹೊನ್ನಾವರ ಮಂಡಲದ ಅಧ್ಯಕ್ಷ ರಾಜೇಶ ಭಂಡಾರಿ ಪ್ರಾಸ್ತವಿಕವಾಗಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಸಪ್ಟಂಬರ್ ೧೭ ರಿಂದ ಅಕ್ಟೋಬರ್ ೭ರ ವರೆಗೆ ಸ್ವಚ್ಛತಾ ಅಭಿಯಾನ ಸೇರಿದಂತೆ ವಿವಿಧ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಬಿಜೆಪಿ ಹೊನ್ನಾವರ ತಾಲೂಕಿನ ಉಸ್ತುವಾರಿ ಶಿವಾನಿ ಶಾಂತಾರಾಮ ಮಾತನಾಡಿ ಸೆಪ್ಟಂಬರ್ ೧೭ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನವಾಗಿದ್ದು ಅಕ್ಟೋಬರ್ ೧೭ ಅವರು ರಾಜಕೀಯಕ್ಕೆ ಬಂದ ದಿನವಾಗಿದೆ. ಹಾಗಾಗಿ ಈ ೨೦ ದಿನಗಳ ವರೆಗೆ ತಾಲೂಕಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮವನ್ನು ಅಭಿಯಾನದ ರೀತಿಯಲ್ಲಿ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪ.ಪಂ.ಅಧ್ಯಕ್ಷ ಶಿವರಾಜ ಮೇಸ್ತ, ಪ್ರಧಾನ ಕಾರ್ಯದರ್ಶಿ ಮಂಜುನಾಥ ನಾಯ್ಕ, ಮುಂತಾದವರು ಉಪಸ್ಥಿತರಿದ್ದರು.
ಭಾವನಾ ಟಿವಿಗಾಗಿ ವೆಂಕಟೇಶ ಮೇಸ್ತ
More Stories
ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಕ ಕಾಡು ಪ್ರಾಣಿ ಸಾವು
ಕಾಡಿನಲ್ಲಿ ವಾಸಮಾಡಬೇಕಾದ ಕಡವೆ ನಾಡಿನಲ್ಲಿ ಪ್ರತ್ಯಕ್ಷ
18ನೇ ವರ್ಷಕ್ಕೆ ಶೇಕಡಾ 100 ಪ್ರತಿಶತ ಫಲಿತಾಂಶ ದಾಖಲಿಸಿದ ನ್ಯೂ ಇಂಗ್ಲಿಷ ಸ್ಕೂಲ್ (ಆಂಗ್ಲಮಾಧ್ಯಮ) ಪ್ರೌಢಶಾಲೆ, ಹೊನ್ನಾವರ