ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ: ಕಡೆಯ ವ್ಯಕ್ತಿಗೆ ನೆರವಾಗುವ ಮೂಲಕ ಸೇವಾ ಸಮರ್ಪಣೆ ಕಾರ್ಯ ಪಕ್ಷ ಯಶಸ್ವಿಯಾಗಿ ಮಾಡಿದೆ ಎಂದು ಬಿಜೆಪಿಯ ವಿಭಾಗದ ಪ್ರಭಾರಿ ಗಿರೀಶ ಪಟೇಲ ಹೇಳಿದರು. ಅವರು ಪಟ್ಟಣದ ಅಡಕೆ ಭವನದಲ್ಲಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಚುನಾಯಿತ ಪ್ರತಿನಿಧಿಗಳ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಪೂರ್ವ ಸಿದ್ಧತಾ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ರಾಜ್ಯ ಹಾಗೂ ಕೇಂದ್ರದಲ್ಲಿ ಉತ್ತಮ ಆಡಳಿತ ನೀಡುತ್ತಿದೆ ಎಂದರು. ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ವೇಂಕಟೇಶ ನಾಯ್ಕರವರು ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ ಸುರಾಣಾ, ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ಮಾಜಿ ಶಾಸಕ ಸುನೀಲ ಹೆಗಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ, ಪ್ರಮುಖರಾದ ಗಿರೀಶ ಪಟೇಲ, ಭಾರತಿ ಜಂಬಲಗಿ, ವೇದಿಕೆಯಮೇಲೆ ಉಪಸ್ಥಿತರಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ