ವರದಿ: ವೆಂಕಟೇಶ ಮೇಸ್ತ ಹೊನ್ನಾವರ
ಹೊನ್ನಾವರ: ಪಟ್ಟಣ ಪಂಚಾಯಿತಿ ಮಂಕಿ ವ್ಯಾಪ್ತಿಯ ಹಲವು ಅಂಗಡಿಮಳಿಗೆಗಳಿಗೆ ಮುಖ್ಯಾಧಿಕಾರಿಗಳು ದಿಢೀರ್ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಕೈಚೀಲಗಳನ್ನು ವಶಪಡಿಸಿಕೊಂಡು, ಎಚ್ಚರಿಕೆ ನೀಡಿದ್ದಾರೆ.೩೦ಕ್ಕೂ ಅಧಿಕ ಅಂಗಡಿಗಳಿoದ ೧೦ ಕೆಜಿ ನಿಷೇದಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು ಮುಂದಿನ ದಿನಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸುವವರ ವಿರುದ್ಧ ವಿವಿಧ ಕಾನೂನು ಕ್ರಮಗಳನ್ನು ಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಅವಶ್ಯವೆನಿಸಿದಲ್ಲಿ ಅಂಗಡಿಗಳ ಪರವಾನಿಗೆ ರದ್ದು ಪಡಿಸಲು ಕ್ರಮಕೈಗೊಳ್ಳಲಾಗುವದು ಎಂದು ಮುಖ್ಯಾಧಿಕಾರಿ ಅಜೇಯ್ ಭಂಡಾರಕರ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶ್ರೀ ನಿಧಿ ಸಂಜೀವಿನಿ ಗ್ರಾಮಮಟ್ಟದ ಒಕ್ಕೂಟ, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳು ಬಟ್ಟೆ ಕೈಚೀಲ ತಯಾರಿ ತರಬೇತಿ ಸಂಬoಧ ೧೦ ಜನರ ತಂಡ ಈಗಾಗಲೇ ಬಟ್ಟೆ ಕ್ಯೆ ಚೀಲ ತರಬೇತಿ ಪಡೆದುಕೊಳ್ಳುತ್ತಿದ್ದು ಮುಂದಿನದಿನಗಳಲ್ಲಿ ಕೈಚೀಲಗಳು ಮಂಕಿ ವ್ಯಾಪ್ತಿಯಲ್ಲಿಯೇ ಅಗ್ಗದ ದರಗಳಲ್ಲಿ ಲಭ್ಯವಾಗಲಿದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ವಿಷ್ಣು ನಾಯ್ಕ್, ಶ್ರೀನಿವಾಸ ಹಳ್ಳೆರ್, ಜನಾರ್ಧನ್ ನಾಯ್ಕ್, ಗಣೇಶ್ ನಾಯ್ಕ್, ಮಂಜುನಾಥ್ ನಾಯ್ಕ್ ಭಾಗವಹಿಸಿದ್ದರು
More Stories
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ