ಬಾಗೇಪಲ್ಲಿ : ಮುಂದಿನ ವಿಧಾನ ಸಭೆ ಚುನಾವಣೆ ತನಕ ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಬದಲಾವಣೆ ಇಲ್ಲ. ಸಿ.ಎಂ.ಬದಲಾವಣೆ ಎನ್ನುವುದು ಕಾಂಗ್ರೆಸ್ ಪಕ್ಷ ಹುಟ್ಟುಹಾಕಿದ ರಾಜಕೀಯ ಕುತಂತ್ರ ಎಂದು ರಾಜ್ಯ ಬಿಜೆಪಿ ಪಕ್ಷದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಅವರು ಬಾಗೇಪಲ್ಲಿ ತಾಲ್ಲೂಕಿನ ಗೂಳೂರಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಬಂದ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಪಟ್ಟಣದ ಬಸ್ ನಿಲ್ದಾಣದ ಬಳಿ ಬಿಟ್ ಕಾಯನ್
ಪ್ರಕರಣ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ
ಬಿಟ್ ಕಾಯನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಸಿ.ಎಂ. ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಎಳೆಯುತ್ತಿದೆ.ಈ ಮೂಲಕ ಕಾಂಗ್ರೆಸ್ ಪಕ್ಷ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಯಾವುದೇ ಕಾರಣಕ್ಕೆ ಸಿ.ಎಂ.ಬದಲಾವಣೆ ಇಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ಮಂಡಲಾಧ್ಯಕ್ಷ ಆರ್. ಪ್ರತಾಪ್, ಮುಖಂಡ ಹಾಗೂ ವರ್ತುಲ ರಸ್ತೆ ಪ್ರಾಧಿಕಾರದ ಅಧ್ಯಕ್ಷ ಸಿ.ಮುನಿರಾಜು, ಕೆ.ಡಿ.ಪಿ.ಸದಸ್ಯ ಹಾಗು ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ವೆಂಕಟೇಶ್, ರಾಜ್ಯ ಕಾರ್ಯಕಾರಣಿ ಸದಸ್ಯ ನಿರ್ಮಲಮ್ಮ, ಮಹಿಳಾ ಮುಖಂಡರಾದ ಮಂಜುಳ, ಗಂಗುಲಮ್ಮ, ರೂಪ, ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನರೆಡ್ಡಿ, ಬಾಬಾಜಾನ್, ರಂಗಾರೆಡ್ಡಿ, ವೆಂಕಟರೆಡ್ಡಿ, ಕೃಷ್ಣಾರೆಡ್ಡಿ, ಗಂಗಿರೆಡ್ಡಿ, ಅನಿಲ್, ಮಂಜು, ಸೋಮು, ಮಧು ಮತ್ತಿತರರು ಹಾಜರಿದ್ದರು.
ವರದಿ: ಗೋಪಾಲರೆಡ್ಡಿ ಬಾಗೇಪಲ್ಲಿ
More Stories
ಬಾಗೇಪಲ್ಲಿ ಕ್ಷೇತ್ರದ 3 ಲಕ್ಷ ನಾಗರೀಕರಿಗೆ ಪೂರ್ಣ ಪ್ರಮಾಣದಲ್ಲಿ ಉಚಿತ ಹೆಲ್ತ್ ಕಾರ್ಡ್ ವಿತರಣೆ
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಆಚರಣೆ
ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು- ಡಾ. ಎ.ಹೆಚ್.ರಾಮರಾವ್