ಮoಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿಯ ರಾಜ್ ಟೈಲ್ಸ್ ಹಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ ೮ ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬoಧಿತ ಆರೋಪಿಗಳು ಮಧ್ಯಪ್ರದೇಶದ ಮೂಲದ ಜಯ ಸಿಂಗ್ (೨೧)ಮುನೀಮ್ ಸಿಂಗ್(೨೦) , ಮನೀಶ್ ತಿರ್ಕಿ(೩೩ ) ಮತ್ತು ಝಾರ್ಖಂಡ್ ಮೂಲದ ಮುಖೇಶ್ ಸಿಂಗ್ (೨೦) ಎಂದು ತಿಳಿಯಲಾಗಿದೆ.
ಈ ಬಂಧಿತ ಆರೋಪಿಗಳು ಕಾರ್ಖಾನೆಯಲ್ಲೇ ಕೆಲಸ ಮಾಡುತ್ತಿದ್ದವರು ಎನ್ನಲಾಗಿದೆ.ಮಧ್ಯಪ್ರದೇಶದ ಮೂಲದ ಮೂವರು ಮತ್ತು ಝಾರ್ಖಂಡ್ ಮೂಲದ ಓರ್ವ ಕಾರ್ಮಿಕ ಬಾಲಕಿಯನ್ನು ತಮ್ಮ ಕೋಣೆಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ, ರಕ್ತಸ್ರಾವ ವಾಗುತ್ತಿದ್ದ ವೇಳೆ ಕತ್ತು ಹಿಸುಕಿ ಕೊಲೆಗೈದು ಮೋರಿಯಲ್ಲಿ ಬಿಸಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯ ನಡೆಸಿದ ಬಳಿಕ ಇಬ್ಬರು ಆರೋಪಿಗಳು ಪುತ್ತೂರಿಗೆ ತೆರಳಿದ್ದಾರೆ ಎನ್ನಲಾಗಿದೆ.”ಇನ್ನಿಬ್ಬರು ಬಾಲಕಿಯನ್ನು ಹುಡುಕಾಡುವ ವೇಳೆ ತಾವೂ ಬಂದು ಯಾರಿಗೂ ಗೊತ್ತಾಗದಂತೆ ನಟಿಸಿದ್ದರು” ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪತ್ರಕರ್ತರಿಗೆ ತಿಳಿಸಿದ್ದಾರೆ.
ನವೆಂಬರ್ ೨೧ ರ ರವಿವಾರ ಸಂಜೆ ಬೆಳಕಿಗೆ ಬಂದ ಪ್ರಕರಣದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿತ್ತು.ನಂತರ ಪೊಲೀಸರು ಆರೋಪಿಗಳ ಹುಡುಕಾಟ ನಡೆಸಿದರು.
ಈಗ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ..
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ