ಕೆ.ಆರ್.ಪೇಟೆಯಲ್ಲಿ ಚಂಪಾಸೃಷ್ಠಿಯ ಸಂಭ್ರಮ, ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಪೂಜೆ. ಭಕ್ತರ ಮಹಾಪೂರ .
ಕೆ.ಆರ್.ಪೇಟೆ:ಚಂಪಾ ಷಷ್ಠಿಯ ಅಂಗವಾಗಿ ಇಂದು ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುರಸ್ಕಾರಗಳು ಹಾಗೂ ಸ್ವಾಮಿಯ ಶಿಲಾಮೂರ್ತಿಗೆ ಅಭಿಷೇಕ ಮಾಡಿ ಲೋಕಕಲ್ಯಾಣಾರ್ಥವಾಗಿ ಪ್ರಾರ್ಥನೆ ಸಲ್ಲಿಸಲಾಯಿತು..
ಕೃಷ್ಣರಾಜಪೇಟೆ ಪಟ್ಟಣದ ಜಯನಗರ ಬಡಾವಣೆಯ ಮುಖಂಡರು ಹಾಗೂ ಚಂಪಾಷಷ್ಠಿ ವಿಶೇಷ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಪಿಕೆಜಿ ಮಹೇಶ್ ಮಾತನಾಡಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಸುಬ್ರಹ್ಮಣ್ಯೇಶ್ವರ ದೇವಾಲಯವು ಅತ್ಯಂತ ಶಕ್ತಿಶಾಲಿ ದೇವರಾಗಿದ್ದು ಬೇಡಿಬಂದ ಭಕ್ತರನ್ನು ಹರಸಿ ಆಶೀರ್ವದಿಸುತ್ತಿರುವ ಸುಬ್ರಹ್ಮಣ್ಯದೇವರು ಎಲ್ಲರಿಗೂ ಹರಸಿ ಕರುಣಿಸುತ್ತಿದ್ದಾನೆ. ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗಿದರೆ ಕೈಹಿಡಿದ ಕೆಲಸದಲ್ಲಿ ಯಶಸ್ಸು ದೊರೆಯುವುದಲ್ಲದೇ ಮನಸ್ಸಿಗೆ ಶಾಂತಿ ನೆಮ್ಮದಿಯು ಲಭಿಸುತ್ತದೆ. ಆದ್ದರಿಂದ ಸಾಧನೆ ಮಾಡಲು ಕಷ್ಟವಾದರೂ ನ್ಯಾಯ, ನೀತಿ, ಧರ್ಮದ ಮಾರ್ಗದಲ್ಲಿಯೇ ಸಾಗೋಣ ಎಂದು ಮನವಿ ಮಾಡಿದರು..
ಇದೇ ಸಂದರ್ಭದಲ್ಲಿ ಭಕ್ತರಿಗೆ ಕಡ್ಲೆಉಸ್ಲಿ ಪ್ರಸಾದ ಹಾಗೂ ಅನ್ನ ಪ್ರಸಾದವನ್ನು ವಿತರಿಸಲಾಯಿತು..ನೂರಾರು ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ.
ಕೃಷ್ಣರಾಜಪೇಟೆ, ಮಂಡ್ಯ.
More Stories
ನಾಳೆ ನಡೆಯಬೇಕಿದ್ದ ಜನಸ್ಪಂದನಾ ಸಭೆ ಅನಿರ್ಧಿಷ್ಠಾವಧಿ ಮುಂದೂಡಿಕೆ
ರಾಜ್ಯದಲ್ಲೇ ಪ್ರಥಮ ಸೌರ ಶಕ್ತಿ ಆಧಾರಿತ ಮಕ್ಕಳ ಹಾಲುಣಿಸುವ ಕೊಠಡಿ ಉದ್ಘಾಟನೆ
ಭಾರತ ದೇಶದಲ್ಲಿ ೨೬ ಕೋಟಿ ಜನ ಅನಕ್ಷರಸ್ಥರಿರುವುದು ವಿಷಾದನೀಯ ಸಂಗತಿ-ಡಾ.ವೆOಕಟೇಶ್