April 30, 2024

Bhavana Tv

Its Your Channel

ನೂತನ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರಿಗೆ  ಮಂಡ್ಯ ನಗರದಲ್ಲಿ ಹೃದಯಸ್ಪರ್ಶಿ ಸ್ವಾಗತ

ಮಂಡ್ಯ:- ರಾಜ್ಯದ ಅಬಕಾರಿ ಸಚಿವರಾದ ನೂತನ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರಿಗೆ ಮಂಡ್ಯ ನಗರದಲ್ಲಿ ಹೃದಯಸ್ಪರ್ಶಿ ಸ್ವಾಗತ ನೀಡಿದ ಯುವನಾಯಕ ಬೂಕನಕೆರೆ ರಾಜಶೇಖರ್ …

ಮಂಡ್ಯ ನಗರದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಅವರನ್ನು ಕೃಷ್ಣರಾಜಪೇಟೆ ತಾಲ್ಲೂಕಿನ ವತಿಯಿಂದ ಬೂಕನಕೆರೆ ಗ್ರಾಮದ ಯುವನಾಯಕ ರಾಜಶೇಖರ್ ಹೃದಯಸ್ಪರ್ಶಿಯಾಗಿ ಸ್ವಾಗತಿಸಿದರು..

ಇದೇ ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾದ ನಂತರ ಭಾರತ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಡ್ಯ ನಗರಕ್ಕೆ ಆಗಮಿಸಿದ ರಾಜ್ಯದ ಅಬಕಾರಿ ಸಚಿವರಾದ ಗೋಪಾಲಯ್ಯ ಅವರನ್ನು ಬೂಕನಕೆರೆ ರಾಜಶೇಖರ್ ಹೂಗುಚ್ಛವನ್ನು ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು..

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಕ್ಷತೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಗೋಪಾಲಯ್ಯ ಅವರು ಮಂಡ್ಯ ಜಿಲ್ಲೆಯ ಹಿರಿಮೆಗೆ ಗರಿ ಮೂಡಿಸುವಂತೆ ಅತ್ಯುತ್ತಮವಾಗಿ ಕೆಲಸ ಮಾಡಿ ಜಿಲ್ಲೆಯನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯಲಿದ್ದಾರೆ ಎಂದು ರಾಜಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
.

error: