
ಭಟ್ಕಳ :- ಸಾಧಕರ ಯಶಸ್ಸಿನ ಹಿಂದೆ ನಿರಂತರ ಪಯತ್ನವಿದೆಎಂದು ದಿ.ನ್ಯೂಇಂಗ್ಲೀಷ ಪಿ.ಯುಕಾಲೇಜಿನ ಪ್ರಾಂಶುಪಾಲ ಡಾ.ವಿರೇಂದ್ರ ಶ್ಯಾನಭಾಗ ಹೇಳಿದರು. ಅವರುರಾಷ್ಟಿçÃಯ ಸೇವಾ ಯೋಜನೆ ಸರಕಾರಿ ಪ್ರೌಢ ಶಾಲೆ ಬೆಳಕೆ ಇವರ ಆಶ್ರಯದಲ್ಲಿ ನಡೆದ“ಪರಿಶ್ರಮವಿಲ್ಲದೆ ಪ್ರಗತಿಎಲ್ಲಿದೆ?’’ಎನ್ನುವ ವಿಷಯದ ಮೇಲೆ ಉಪನ್ಯಾಸ ನೀಡುತ್ತಾ, ಕರೋನಾದಿಂದಾಗಿ ಶಿಕ್ಷಣ ವ್ಯವಸ್ಥೆಯು ಕುಸಿದು ಬಿದ್ದಿದ್ದು, ವಿದ್ಯಾರ್ಥಿಗಳು ಬರೆಯುವ, ಓದುವ, ಏಕಾಗ್ರತೆಯಿಂದ ಪಾಠ ಕೇಳುವ ಸಾಮರ್ಥ್ಯವನ್ನು ಕ್ಷೀಣಿಸಿಕೊಂಡಿದ್ದು, ಕೇವಲ ಮೊಬಾಯಿಲ್ಗೆ ಅವಲಬಿಂತರಾಗಿರುವುದುಕAಡು ಬರುತ್ತಿದ್ದು ನಿರಂತರ ಪರಿಶ್ರಮದಿಂದ ಮಾತ್ರ ಉತ್ತಮ ಅಂಕಗಳನ್ನು ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.
ಕರ್ಯಕ್ರಮವನ್ನು ಉಧ್ಘಾಟಿಸಿದ ಬೆಳಕೆ ಗ್ರಾಮ ಪಂಚಾಯತದ ಅಧ್ಯಕ್ಷರಾದ ಶಾಂತಿ ಜಗದೀಶ ಮೊಗೇರ ಅವರು ಶಾಲೆಯ ರಾಷ್ಟಿçÃಯ ಸೇವಾ ಯೋಜನಾ ಘಟಕವು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದು,್ದ ವಿದ್ಯಾರ್ಥಿಗಳಿಗೆ ಇಂತಹ ಕರ್ಯಕ್ರಮಗಳು ಇಂದು ಅತ್ಯವಶ್ಯಕವಾಗಿವೆ ಎಂದು ಹೇಳಿದರು.
ಶಾಲೆಯ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಸಹಕರಿಸುತ್ತಿರುವ ಬೆಳಕೆ ಗ್ರಾಮ ಪಂಚಾಯತದ ಸದಸ್ಯರಾದ ಪಾಂಡುರoಗ ನಾಯ್ಕರವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಉತ್ತಮವಾಗಿ ಓದುವುದರ ಜೊತೆಗೆ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಮ ಪಂಚಾಯತo ಸದಸ್ಯಜಗದೀಶ ನಾಯ್ಕ ಮಾತನಾಡುತ್ತಾ ವಿದ್ಯಾರ್ಥಿಗಳು ಮೊಬಾಯಿಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಹೇಳುತ್ತಾ ಶಾಲೆಗೆ ಅಗತ್ಯವಾಗಿ ಬೇಕಾಗಿರುವ ಇಂಟರನೆಟ್ ಸೌಲಭ್ಯವನ್ನು ತಾವು ಮಾಡಿಸಿಕೊಡುವುದಾಗಿ ಹೇಳಿದರು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಹೊನ್ನಪ್ಪ ನಾಯ್ಕ ಮತ್ತು ಗಜಾನನ ಯುವಕ ಮಂಡಳದ ಅಧ್ಯಕ್ಷರಾದ ಅನಂತ ಮೊಗೇರ ಉಪಸ್ಥಿತರಿದ್ದರು. ಮುಖ್ಯಾದ್ಯಾಪಕಿ ಶಾಲಿನಿ ನಾಯಕ ಅಧ್ಯಕ್ಷತೆ ವಹಿಸಿದ್ದರು. ರಾಷ್ಟಿçÃಯ ಸೇವಾ ಯೋಜನೆಯ ಕಾರ್ಯಕ್ರಮಾಧಿüಕಾರಿ ಪ್ರಕಾಶ ಶಿರಾಲಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. Pದರು.ಶಿಕ್ಷಕಿ ಭಾರತಿ ಶ್ಯಾನಭಾಗ ನಿರೂಪಿಸಿದರು. ಸಿ.ಎಸ್.ಬೈಲೂರ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ