ಭಟ್ಕಳ: ತಾಲೂಕಿನ ಆಳ್ವೇಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್. ಎಸ್. ಎಸ್. ವಾರ್ಷಿಕ ಶಿಭಿರದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಫವಾಜ್ ಪಿ.ಎ. ಅವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಗಳನ್ನು ವಿವರಿಸಿದರು.
ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಡಿಯಲ್ಲಿ ದೊರೆಯುವ ಸೌಲಭ್ಯಗಳನ್ನ ಹಾಗೂ ಮಹಿಳಾ ಮತ್ತು ಮಕ್ಕಳ ರಕ್ಷಣೆಗಾಗಿಯೇ ಇರುವ ಕಾನೂನುಗಳ ಕುರಿತು ತಿಳಿವಳಿಕೆಯನ್ನು ನೀಡಿದರು. ವಿದ್ಯಾರ್ಥಿಗಳು ಕಾನೂನು ಸೇವಾ ಪ್ರಾಧಿಕಾರದ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಎನ್. ಎಸ್. ಎಸ್. ಅಧಿಕಾರಿ ವೈಶಾಲಿ ಜೆ.ಆರ್., ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಜಯರಾಮ ನಾಯ್ಕ ಉಪಸ್ಥಿತರಿದ್ದರು.
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: