ಭಟ್ಕಳ: ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಭಟ್ಕಳದಲ್ಲಿಯೂ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
ಭಟ್ಕಳ ಸಂಶುದ್ದೀನ್ ಸರ್ಕಲ್ನಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ವಿನೋದ ಪ್ರಭು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು, ಈ ಸಂದರ್ಬದಲ್ಲಿ ಭಟ್ಕಳ ಬಿಜೆಪಿ ಅಧ್ಯಕ್ಷ ಸುಬ್ರಾಯ ದೇವಾಡಿಗ ಮಾತನಾಡಿದರು, ಬಿಜೆಪಿ ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
More Stories
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್