ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಮೇ ೭ ರಂದು ಹೋನ್ನಾವರದಲ್ಲಿ ಜರುಗಲಿರುವ ಅರಣ್ಯವಾಸಿಗಳನ್ನ ಉಳಿಸಿ- ಜಾಥಕ್ಕೆ ಹಿರಿಯ ಸಮಾಜವಾದಿ ಚಿಂತಕ ಕಾಗೋಡ ತಿಮ್ಮಪ್ಪನವರಿಗೆ ಆಹ್ವಾನ ಪತ್ರನೀಡಿ ಆಹ್ವಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ ೩೦ ರ ಒಳಗೆ ಸುಫ್ರೀಂ ಕೋರ್ಟನಲ್ಲಿ ರಾಜ್ಯ ಸರಕಾರವು ಅರಣ್ಯವಾಸಿಗಳ ಪರ ಪ್ರಮಾಣ ಪತ್ರ ಸಲ್ಲಿಸುವುದು, ಶಿವಮೊಗ್ಗ ಶರಾವತಿ ಅಭಯಾರಣ್ಯ ಪ್ರದೇಶಕ್ಕೆ ಉತ್ತರ ಕನ್ನಡದ ಅರಣ್ಯ ಪ್ರದೇಶವನ್ನು ಸೇರಿಸಲ್ಪಟ್ಟಿರುವ ಹಾಗೂ ಅಪೂರ್ಣ ಅರಣ್ಯ ಹಕ್ಕು ಸಮಿತಿಯಿಂದ ಕಾನೂನು ಬಾಹಿರವಾಗಿ ೩ ತಲೇಮಾರಿನ ದಾಖಲೆಗಳನ್ನ ಅರಣ್ಯವಾಸಿಗಳಿಂದ ಒತ್ತಾಯಿಸುವುದನ್ನ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಈ ಸಂದರ್ಭದಲ್ಲಿ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
More Stories
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ