ಕಾರ್ಕಳ:ತೆಳ್ಳಾರಿನ ಮುಖ್ಯರಸ್ತೆಯಲ್ಲಿ ಪುರಸಭೆಯ ಪೈಪ್ ಲೈನ್ ಕಾಮಗಾರಿಯಿಂದ ನಿರ್ಮಾಣವಾಗಿರುವ ಹೊಂಡಗಳನ್ನು ಮುಚ್ಚುವಂತೆ ಇಂದು ತೆಳ್ಳಾರಿನ ಗ್ರಾಮಸ್ಥರು ಪುರಸಭೆಗೆ ಮನವಿಯನ್ನು ಸಲ್ಲಿಸಿದರು. ಮುಖ್ಯಾಧಿಕಾರಿಗಳ ಅನುಪಸ್ಥಿತಿಯಲ್ಲಿ ಕಿರಿಯ ಅಭಿಯಂತರರು ಮನವಿಯನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ದುರ್ಗ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ನಾಯಕ್, ಮಾಜಿ ಅಧ್ಯಕ್ಷ ದಿನೇಶ್ ನಾಯಕ್, ರಾಜೇಂದ್ರ, ಸಂತೋಷ್, ಅರ್ಜುನ್, ಆದರ್ಶ್, ವಸಂತ ನಾಯ್ಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.