ಕಾರವಾರ: ರೈಲಿನ ಮೂಲಕ ಮುಂಬೈನಿAದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಕಾರವಾರದ ರೈಲ್ವೆ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ. ಮಂಗಳೂರು
ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತಿದ್ದ ಮನೋಹರ್ ಸಿಂಗ್ ನನ್ನು ಕಾರವಾರದ ಬಳಿ ರೈಲ್ವೆ ಪೊಲೀಸರು ದಂಡ ವಿಧಿಸಿದ್ದರು. ಈ ವೇಳೆ ಅನುಮಾನಗೊಂಡ ರೈಲ್ವೆ ಪೊಲೀಸರು ಈತನ ಬಳಿ ಇದ್ದ ಬ್ಯಾಗ್ ಅನ್ನು ತಪಾಸಣೆಗೆ ಒಳಪಡಿಸಿದಾಗ ಈತನ ಬಳಿ ಇದ್ದ ಬ್ಯಾಗಿನಲ್ಲಿ 100 ಬಂಡಲ್ ನ ಎರಡು ಕೋಟಿ ಹಣ ಪತ್ತೆಯಾಗಿದೆ.
ಮನೋಹರ್ ಸಿಂಗ್ ಮುಂಬೈನ ಭರತ್ ಬಾಯ್ ಅಲಿಯಾಸ್ ಪಿಂಟೊ ಎಂಬುವರ ಬಳಿ 15 ಸಾವಿರಕ್ಕೆ ಕೆಲಸ ಮಾಡುತಿದ್ದ. ಮನೋಹರ್ ಸಿಂಗ್ ತನ್ನ ಮಾಲೀಕನಿಂದ ಬ್ಯಾಗ್ ಪಡೆದು ಮಂಗಳೂರಿನಲ್ಲಿ ರಾಜು ಎಂಬವರಿಗೆ ತಲುಪಿಸಲು ಮುಂಬೈನಿAದ ಮಂಗಳೂರಿಗೆ ಹೊರಟಿದ್ದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ರೈಲ್ವೆ ಪೊಲೀಸರು ಆರೋಪಿಯನ್ನು ಕಾರವಾರ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
More Stories
ಮಹಿಳೆಯರ ಮೇಲೆ ದೌರ್ಜನ್ಯ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ
ಕಾಗೇರಿ ಕಣ್ಣಲ್ಲಿ ರಕ್ತವಿಲ್ಲ, ಬಡಜನರ ಕಾಳಜಿ ಇಲ್ಲ: ಮಾರ್ಗರೇಟ್ ಆಳ್ವಾ ವಾಗ್ದಾಳಿ
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ