ಹೊನ್ನಾವರ: ಸ್ಥಳೀಯ ಎಂ. ಪಿ. ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹೊನ್ನಾವರ ಇದರ 2021-22 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವನ್ನು ದಿನಾಂಕ 11-06-2022 ರ ಶನಿವಾರ ಮುಂಜಾನೆ 10 ಗಂಟೆಗೆ ಆಯೋಜಿಸಲಾಗಿದೆ. ಸಭಾ ಕಾರ್ಯಕ್ರಮದಲ್ಲಿ ಡಾ. ರವಿ ಹೆಗಡೆ, ಹೂವಿನಮನೆ, ನ್ಯಾಯವಾದಿಗಳು, ಸಿದ್ಧಾಪುರ ಇವರು ಉದ್ಘಾಟಕರಾಗಿ, ಡಾII ನಜೀಮ್ ಜಾವೇದ್ ಖಾನ್, ಅಂತರಾಷ್ಟಿçÃಯ ಕ್ರೀಡಾಪಟು, ಕುಮಟ ಇವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಶ್ರೀ ಕೃಷ್ಣಮೂರ್ತಿ ಭಟ್ಟ, ಶಿವಾನಿ ಅಧ್ಯಕ್ಷರು, ಎಂ.ಪಿ.ಇ. ಸೊಸೈಟಿ ಹೊನ್ನಾವರ ಇವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ. ವಿಜಯಲಕ್ಷಿö್ಮ ನಾಯ್ಕ ಇವರು ವಹಿಸಲಿದ್ದಾರೆ ಎಂದು ಪ್ರಚಾರ ಸಮಿತಿಯ ಸಂಚಾಲಕರಾದ ಡಾ. ಡಿ. ಎಲ್. ಹೆಬ್ಬಾರ ಹಾಗೂ ಪ್ರಾಚಾರ್ಯರು ಜಂಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಆಯೋಜಿಸಲಾಗಿದೆ.
More Stories
ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಕೂಜಳ್ಳಿಯ ಹಿರಿಯ ಜೀವ ಅನಸೂಯಾ ಹೆಗಡೆ,
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,