ಭಟ್ಕಳ ತಾಲೂಕಿನ ಮುರುಡೇಶ್ವರ ಬಸ್ತಿ ಅಮೃತ ಫುಡ್ಲೈನ್ ಹೊಟೇಲ್ ಹಿಂಭಾಗದ ತೆಂಗಿನತೋಟದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು 7 ಜನರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳನ್ನು ಈಶ್ವರ ನಾರಾಯಣ ನಾಯ್ಕ, ವಿನಾಯಕ ವೆಂಕಟ್ರಮಣ ನಾಯ್ಕ, ಯಶೋಧರ ವೆಂಕಪ್ಪ ನಾಯ್ಕ, ನವೀನ ನಾರಾಯಣ ಶೆಟ್ಟಿ, ಮಂಜುನಾಥ ದುರ್ಗಪ್ಪ ನಾಯ್ಕ, ಗೋಪಾಲ ಮಾದೇವ ನಾಯ್ಕ,ಈಶ್ವರ ತಿಮ್ಮಯ್ಯ ನಾಯ್ಕ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ರು.11400 ನಗದು, ಇಸ್ಪೀಟ್ ಎಲೆಗಳನ್ನು ಪೊಲೀಸರು ಜಪ್ತುಪಡಿಸಿಕೊಂಡಿದ್ದಾರೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಐ ಪರಮಾನಂದ ಕೊಣ್ಣೂರು ತನಿಖೆ ಕೈಗೊಂಡಿದ್ದಾರೆ
More Stories
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ:
ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ: