ಮುರುಡೇಶ್ವರ: ಯಾರೋ ಕಳ್ಳರು ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಸುಮಾರು ೫೦ ರಿಂದ ೬೦ ಗ್ರಾಂ ತೂಕದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಭಟ್ಕಳ ಮಾವಳ್ಳಿ-೧ ರ ಜನತಾ ಕಾಲೋನಿಯಲ್ಲಿ ನಡೆದಿದೆ.
ಮಾದೇವ ಈರಪ್ಪ ನಾಯ್ಕ ಎನ್ನುವವರ ಮನೆ ಕಳ್ಳತನವಾಗಿದೆ. ಕಳೆದ ೧೫ ದಿನದ ಹಿಂದಷ್ಟೇ ಇವರ ತಂದೆ ನಿಧನರಾಗಿದ್ದು ಅವರ ಕಾರ್ಯ ಮಾಡಲು ತನ್ನ ಹೆಂಡತಿಯೊAದಿಗೆ ಜನತಾ ಕಾಲೋನಿಯಲ್ಲಿರುವ ತಮ್ಮ ಹಳೆಯ ಮನೆಗೆ ಹೊಗಿ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿ ಮರು ದಿನ ಬೆಳ್ಳಿಗ್ಗೆ ಮನೆಗೆ ಬಂದು ನೋಡಿದಾಗ ಮನೆಯ ಮುಂಬಾಗಿಲು ಮುರಿದು ಕಳ್ಳತನ ಮಾಡಿರುದನ್ನು ಗಮನಿಸಿದ ಮನೆಯ ಮಾಲೀಕ ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಮನೆ ಬಾಗಿಲು ತೆರೆದು ನೋಡಿದಾಗ ಯಾರೋ ಕಳ್ಳರು ಮುಂಭಾಗಿಲಿನ ಇಂಟರ್ ಲಾಕ್ ಮುರಿದು ಮನೆಯ ಒಳಗಡೆ ಪ್ರವೇಶಿಸಿ ಕೋಣೆ ಯಲ್ಲಿರುವ ಕಪಾಟನ್ನು ಮುರಿದು ಕಪಾಟಿನಲ್ಲಿದ್ದ ಸುಮಾರು ೨ ಲಕ್ಷ ೮೦ ಸಾವಿರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.
ಕಳುವಾದ ಚಿನ್ನಾಭರಣಗಳು:
೭ ಬಂಗಾರದ ಉಂಗುರ , ೨ ಬಂಗಾರದ ಬಳೆ, ೧ ಬಂಗಾರದ ಬ್ರಾಸ್ ಲೈಟ್, ೧ ಬಂಗಾರದ ಚೈನ್, ೨ ಬಂಗಾರದ ನಕ್ಲೆಸ್ ಗಳು ಕಳ್ಳತನವಾದೆ . ಇವೆಲ್ಲ ಚಿನ್ನಾಭರಣ ಇವರ ಮದುವೆಗೆ ಬಂದ ಉಡುಗೊರೆಗಳಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ:
ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ: