April 16, 2025

Bhavana Tv

Its Your Channel

ಎಚ್ ಎಸ್ ಮಹದೇವ ಪ್ರಸಾದ್ ಹುಟ್ಟುಹಬ್ಬದಂದು ಅಭಿಮಾನಿಗಳು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ ಎಚ್ ಎಸ್ ಮಹದೇವ ಪ್ರಸಾದ್ ಅಭಿಮಾನಿಗಳು ಆಯೋಜಿಸಿದ್ದ ದಿವಂಗತ ಎಚ್ ಎಸ್ ಪ್ರಸಾದ್ ರವರ 64ನೇ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಸುಬ್ಬಮ್ಮ ಸಿರಿಯಪ್ಪನವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಎಚ್ ಎಮ್ ಗಣೇಶ್ ಪ್ರಸಾದ್, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕಬ್ಬಳ್ಳಿ ಮಹೇಶ್, ದೀಪು, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಗೋಪಾಲ್ , ಯುವಕರು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ:ಸದಾನಂದ ಕನ್ನೇಗಾಲ

error: