ಭಟ್ಕಳ: ಹಿಂದೂ ಜಾಗರಣ ವೇದಿಕೆ ಭಟ್ಕಳ ಅಖಂಡ ಭಾರತ ಸಂಕಲ್ಪ ದಿನದ ಹಿನ್ನೆಲೆ ಪಂಜಿನ ಮೆರವಣಿಗೆಯು ಭಟ್ಕಳ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು.
ನಾಮಧಾರಿ ಸಮಾಜದ ಅಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಹ ಕಾರ್ಯವಾಹ ಗಣೇಶ ಖಂಡಗಾರ ಹಾಗೂ ನಿವೃತ್ತ ಪೋಲೀಸ್ ಅಧಿಕಾರಿ ಹಾಗೂ ಮಾಜಿ ಸೈನಿಕ ಅರುಣ ನಾಯ್ಕ ಅವರೆಲ್ಲರು ಸೇರಿ ಉದ್ಘಾಟಿಸಿದರು.
ಮೆರವಣಿಗೆ ಮೊದಲು ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವರಲ್ಲಿ ಪೂಜೆ ಸಲ್ಲಿಸಿ ದೇವಸ್ಥಾನದ ಮೂಲಕ ಪ್ರಾರಂಭವಾದ ಮೆರವಣಿಗೆ ಮುಸ್ಬಾ ಸ್ಟ್ರೀಟ್ನ ಮೂಲಕ ಮಾರಿಗುಡಿ ಚನ್ನಪಟ್ಟಣ ಹನುಮಂತ ದೇವಸ್ಥಾನ, ಹೂವಿನ ಚೌಕಗಳನ್ನು ಸುತ್ತಿ ಪುನಃ ಪೇಟೆ ಮುಖ್ಯ ರಸ್ತೆಯ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ -66 ರ ಮೂಲಕ ಸಂಶುದ್ದೀನ್ ವೃತ್ತದ ಬಳಿ ಬಂದು ಅಲ್ಲಿಂದ ಪುನಃ ನಗರ ಪೋಲಿಸ್ ಠಾಣೆ ಮಾರ್ಗದಿಂದ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನಕ್ಕೆ ಬಂದು ಸೇರಿತು.
ನಂತರ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಹಿಂದು ಜಾಗರಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಗವಾಳಿ, ಹಿಂದು ಜಾಗರಣಾ ವೇದಿಕೆ ಭಟ್ಕಳ ಘಟಕದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ, ಹಿಂದು ಜಾಗರಣಾ ವೇದಿಕೆ ಸದಸ್ಯರಾದ ತುಳಸಿದಾಸ ನಾಯ್ಕ, ರಾಮಕ್ರಷ್ಣ ನಾಯ್ಕ, ಕೃಷ್ಣ ಕಂಚುಗಾರ, ಕುಮಾರ ನಾಯ್ಕ ಹನುಮಾನನಗರ, ಶ್ರೀನಿವಾಸ ನಾಯ್ಕ, ಶಾಸಕ ಸುನೀಲ ನಾಯ್ಕ, ಬಿಜೆಪಿ ಪ್ರಮುಖರಾದ ಈಶ್ವರ ನಾಯ್ಕ ಮಾವಳ್ಳಿ, ದಿನೇಶ ನಾಯ್ಕ, ರಾಜೇಶ ನಾಯ್ಕ, ಮುಕುಂದ ನಾಯ್ಕ, ರವಿ ನಾಯ್ಕ ಜಾಲಿ, ಶ್ರೀಕಾಂತ ನಾಯ್ಕ, ಸುರೇಶ ನಾಯ್ಕ ಮಣ್ಕುಳಿ, ಈಶ್ವರ ನಾಯ್ಕ ಆಸರಕೇರಿ ಸೇರಿದಂತೆ 200ಕ್ಕೂ ಅಧಿಕ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಪಾಲ್ಗೊಂಡಿದ್ದರು.
More Stories
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು