ಭಟ್ಕಳ ಮಜ್ಲಿಸೆ ಇಸ್ಲಾಹ್-ವ-ತಂಝಿಮ್ ಸಂಸ್ಥೆಯು ಆಝಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಆ.15ರಂದು ಸಂಜೆ ಆಯೋಜಿಸಿದ್ದ ತಿರಂಗ ಬೈಕ್ ಮಹಾ ರ್ಯಾಲಿಯಲ್ಲಿ 2000ಕ್ಕೂ ಅಧಿಕ ದ್ವಿಚಕ್ರವಾಹನಗಳು ಭಾಗಿಯಾಗಿದ್ದು ಅತ್ಯಂತ ಯಶಸ್ವಿಯಾಗಿ ನೆರವೇರಿತು.
ಸಾಗರ ರಸ್ತೆಯ ಆನಂದಾಶ್ರಮ ಕಾನ್ವೆಂಟ್ ಶಾಲಾ ಮೈದಾನದಿಂದ ಆರಂಭಗೊAಡ ಬೈಕ್ರ್ಯಾಲಿ ನವಾಯತ್ ಕಾಲೋನಿಯ ತಾಲೂಕು ಕ್ರೀಡಾಂಗಣದಲ್ಲಿ ಮುಕ್ತಾಯ ಗೊಂಡಿತು.
ಈ ಸಂದರ್ಭದಲ್ಲಿ ಬೈಕ್ ರ್ಯಾಲಿಯನ್ನುದ್ದೇಶಿ ಮಾತನಾಡಿದ ತಂಝೀಮ್ ಪ್ರಧಾನ ಕಾರ್ಯದರ್ಶಿ ದೇಶಕ್ಕಾಗಿ ನಾವು ನಮ್ಮ ಪ್ರಾಣ ಮತ್ತು ಸಂಪತ್ತನ್ನು ತ್ಯಾಗ ಮಾಡಲು ಸಿದ್ದರಿದ್ದೇವೆ. ಈ ದೇಶ ನಮಗೆ ನಮ್ಮ ಪ್ರಾಣಕ್ಕಿಂತಲೂ ಪ್ರೀಯವಾಗಿದೆ ಎಂದರು.
ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ಎಂ.ಜೆ., ಮಾತನಾಡಿ, ಭಾರತದಲ್ಲಿನ ಶಾಂತಿಯುತ ವಾತವರಣ ಕದಡುವ ಎಷ್ಟೇ ಪ್ರಯತ್ನಗಳು ನಡೆಯಲಿ ಇಲ್ಲಿನ ಜನರು ಮಾತ್ರ ಅದಕ್ಕೆ ಕಿವಿಗೊಡುವುದಿಲ್ಲ. ಕೋಮು ದ್ರೂವೀಕರಣದ ನಡುವೆಯೂ ನಮ್ಮಲ್ಲಿ ಸಹೋದರತೆ, ಪ್ರೀತಿ ಪ್ರೇಮ ಇನ್ನೂ ಜೀವಂತವಾಗಿದೆ. ಇಲ್ಲಿನ ಬಹುಸಂಖ್ಯಾತರು ಎಲ್ಲರೊಂದಿಗೆ ಬದುಕುವ ಪಣತೊಟ್ಟಿದ್ದಾರೆ. ದೇಶ ವಿಶ್ವಗುರು ಎನಿಸಿಕೊಳ್ಳಬೇಕಾದರೆ ಇಲ್ಲಿನ ಹಿಂದೂ-ಮುಸ್ಲಿಮರು ಕೂಡ ಶ್ರಮಿಸಬೇಕಾಗಿದೆ. ನಾವು ಎಲ್ಲರನ್ನೂ ಪ್ರೀತಿಸುವವರಾಗಿದ್ದೇವೆ. ಪ್ರೀತಿ, ಶಾಂತಿಯನ್ನು ಬಯಸುತ್ತೇವೆ ಎಂದರು.
ರಾಬಿತಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅತಿಕರ್ರಹ್ಮಾನ್ ಮುನಿರಿ, ತಂಝೀಮ್ ಮುಖಂಡಇನಾಯತುಲ್ಲಾ ಶಾಬಂದ್ರಿ, ಪೊಲೀಸ್ ವೃತ್ತ ನಿರೀಕ್ಷಕರ ದಿವಾಕರ್ ಮಾತನಾಡಿದರು.
ತಂಝೀಮ್ ಉಪಾಧ್ಯಕ್ಷ ಮುಹಮ್ಮದ ಜಾಫರ್ ಮೊಹತೆಶಮ್, ಅಬ್ದುಲ್ರಹ್ಮಾನ್ಜಾನ್, ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ಅಧ್ಯಕ್ಷ ಮೌಲಾನಅಝೀಝರ್ರಹ್ಮಾನ್ ನದ್ವಿ, ಮೌಲಾನ ಯಾಸೀರ್ ನದ್ವಿ, ಮತ್ತಿತರ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅತ್ಯಂತಉತ್ಸಾಹ, ಸಡಗರದಿಂದತಿರAಗ ಬೈಕ್ ಮಹಾ ರ್ಯಾಲಿಯಲ್ಲಿಯುವಕರು ಭಾಗವಹಿಸಿದ್ದರು.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.