ಗುಂಡ್ಲುಪೇಟೆ ಪಟ್ಟಣದ ಕುಂಬಾರರ ಸಮುದಾಯ ಭವನದಲ್ಲಿ ನಡೆದ ಬೃಹತ್ ಉಚಿತ ಕಣ್ಣಿನ ಶಿಬಿರವನ್ನು ಕುಂಬಾರರ ಸಮುದಾಯ ದ ರಾಜ್ಯ ಅಧ್ಯಕ್ಷರಾದ ಶಿವಕುಮಾರ್ ಚೌವಡ ಶೆಟ್ಟಿ ಯವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖಾಂತರ ಚಾಲನೆ ನೀಡಿದರು ನಂತರ ಮಾತನಾಡಿದವರು ನಮ್ಮ ಸಮುದಾಯದವರು ಈ ರೀತಿ ದೊಡ್ಡದಾದ ಒಂದು ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು ನಮಗೆ ಸಂತೋಷ ತಂದಿದೆ ನಮ್ಮ ಸಮಾಜದವರು ಈ ರೀತಿ ಸಮಾಜದ ಬಗ್ಗೆ ಕಾಳಜಿ ವಹಿಸಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ ಅಲ್ಲದೆ ಸಮುದಾಯ ಭವನ ಉದ್ಘಾಟನೆಯಾಗಿ ಒಂದು ತಿಂಗಳು ಕಳೆದಿದೆ ಅಷ್ಟೇ ಅದರ ಮುಂದುವರಿದ ಭಾಗವಾಗಿ ಈ ಒಂದು ಬೃಹತ್ ಕಣ್ಣಿನ ತಪಾಸಣಾ ಶಿಬಿರವನ್ನು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಎಂದರು
ಈ ಸಂದರ್ಭದಲ್ಲಿ ಶ್ರೀಮತಿ ಸಿ ರೇಣುಕಾಂಬ, ದಂಡಾಧಿಕಾರಿಗಳಾದ ಸಿ .ಜಿ . ರವಿಶಂಕರ್, ಮಹಾದೇವ ಶೆಟ್ಟಿ, ತಾಲೂಕು ಕುಂಬಾರ ಸಂಘದ ಅಧ್ಯಕ್ಷರಾದ ಪಿ. ವೆಂಕಟರಾಜು, ಉಪಾಧ್ಯಕ್ಷರುಗಳಾದ ಕೊಂಗಳ್ ಶೆಟ್ಟರು, ತಮ್ಮಣ್ಣ ಹನುಮಂತ ಶೆಟ್ಟಿ, ಸಂಪತ್ತು , ಹಾಗೂ ತಾಲೂಕು ಕುಂಬಾರ ಸಂಘದ ಎಲ್ಲಾ ಪದಾಧಿಕಾರಿಗಳು ಮುಖಂಡರುಗಳು ಯುವಕರುಗಳು ಸಾರ್ವಜನಿಕರು ಮತ್ತು ಅರವಿಂದ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ವರದಿ: ಸದಾನಂದ ಕನ್ನೇಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ