ಭಟ್ಕಳ: ಸರಕಾರಿ ಪ್ರೌಢಶಾಲೆ ಚಿತ್ತಾರ ವಿದ್ಯಾರ್ಥಿನಿಯರು 28-09-2022 ರಂದು ಎಸ್ಡಿಎಂ ಕಾಲೇಜ್ ಆಟದ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬಿಜಾಪುರದಲ್ಲಿ ನಡೆಯುವ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಐದು ವಿದ್ಯಾರ್ಥಿನಿಯರು ಆಯ್ಕೆ ಆಗಿರುತ್ತಾರೆ. ಆಯ್ಕೆ ಆದ 9ನೇ ತರಗತಿಯ ವಿದ್ಯಾರ್ಥಿನಿಯರಾದ ರಕ್ಷಿತಾ ನಾಯ್ಕ, ವಿದ್ಯಾಶ್ರೀ ಗೌಡ , ತನುಜಾ ನಾಯಕ, ಇಂಚರ ಗೌಡ, ಹಾಗೂ ಮನೀಷ ಮೊಗೇರ ಇವರಿಗೆ ಪ್ರೌಢಶಾಲಾ ಮುಖ್ಯಾಧ್ಯಾಪಕರಾದ ದೀಪಕ ನಾಯ್ಕ ದೈಹಿಕ ಶಿಕ್ಷಣ ಶಿಕ್ಷಕರಾದ ಗೋಪಾಲ ಲಮಾಣಿ ಹಾಗೂ ಎಲ್ಲಾ ಶಿಕ್ಷಕರು ಎಸ್ ಡಿ ಎಂ ಸಿ ಸದಸ್ಯರು ಊರ ನಾಗರಿಕರು ಶುಭಾಶಯವನ್ನು ವ್ಯಕ್ತಪಡಿಸಿರುತ್ತಾರೆ ಈ ವಿದ್ಯಾರ್ಥಿಗಳನ್ನು ಸಿದ್ಧಪಡಿಸಿದ ದೈಹಿಕ ಶಿಕ್ಷಣ ಶಿಕ್ಷಕರಾದ ಗೋಪಾಲ ಲಮಾಣಿಯವರಿಗೂ ಊರ ನಾಗರಿಕರು ಶುಭಾಶಯಗಳು ಕೋರಿರುರುತ್ತಾರೆ ಈ ವಿದ್ಯಾರ್ಥಿಗಳು ಸಪ್ಟೆಂಬರಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ದೊಡ್ಡವರೊಂದಿಗೆ ಸ್ಪರ್ಧಿಸಿ ಅಲ್ಲಿಯೂ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮಾಡಿರುತ್ತಾರೆ ಈ ವಿದ್ಯಾರ್ಥಿಗಳು ವಿಭಾಗ ಮಟ್ಟದಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಲಿ ಎಂದು ಹಾರೈಸೋಣ
More Stories
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು