ಭಟ್ಕಳ :- ಆತ್ಮಹತ್ಯೆ ಮಾಡಿಕೊಂಡಿದ್ದ ತಂದೆಯ ಅಂತ್ಯಸAಸ್ಕಾರವನ್ನು ಸಂಪ್ರದಾಯದ ಕಟ್ಟುಪಾಡನ್ನು ಮುರಿದು ಮಗಳು ನೆರವೇರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಡೀಲು ಸಬ್ಬತ್ತಿಯಲ್ಲಿ ಮಂಗಳವಾರ ನಡೆದಿದೆ.
ಮಂಜುನಾಥ ನಾಗಪ್ಪ ನಾಯ್ಕ್ (51) ಎಂಬವವರು ನಿನ್ನೆ ದಿನ ತಮ್ಮ ಮನೆಯ ಗೃಹಪ್ರವೇಶ ನೆರವೇರಿಸಿದ್ದರು. ಆದರೆ ಯಾವುದೊ ಕಾರಣ ಕ್ಕೆ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆ ಮೂರು ಜನ ಹೆಣ್ಣುಮಕ್ಕಳಿದ್ದು ಗಂಡುಮಕ್ಕಳಿರಲಿಲ್ಲ. ಹೀಗಾಗಿ ರಕ್ತಸಂಬAಧಿಗಳಲ್ಲಿ ಯಾರಾದರೂ ಚಿತೆಗೆ ಅಗ್ನಿಸ್ಪರ್ಷ ಮಾಡಬೇಕಿತ್ತು. ಆದರೆ ಸಂಪ್ರದಾಯಕ್ಕೆ ಕಟ್ಟುಬೀಳದೇ ಹಿರಿಯ ಮಗಳು ಶ್ವೇತಾ ನಾಗಪ್ಪ ನಾಯ್ಕ ಅಂತ್ಯಸAಸ್ಕಾರ ನೆರವೇರಿಸುವ ಮೂಲಕ ಗಂಡಿನಷ್ಟೇ ತಾವೂ ಸಮರ್ಥರು ಎಂಬುದನ್ನು ತೋರಿಸಿಕೊಟ್ಟು ಸಮಾಜದ ಮಹಿಳೆಯರಿಗೆ ಮಾದರಿಯಾದರು.
More Stories
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ
ಎಸ್.ಎಸ್. ಎಲ್. ಸಿ ಪರೀಕ್ಷೆಯಲ್ಲಿ ಶ್ರೀವಲಿ ಪ್ರೌಢಶಾಲೆ ಶೇಕಡಾ 100% ಫಲಿತಾಂಶ