ಕೊಡಗು:- ಎಲ್ಲಾರು ಇದ್ದು ಅನಾಥರಾದ ರಾಜು ಎಂಬ ವ್ಯಕ್ತಿ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ
ಬಿದ್ದಿರುವುದನ್ನು ಕಂಡು ಸ್ಥಳೀಯರು ಫೋನ್ ಮುಖಾಂತರ ಕರವೇ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರಿಗೆ ತಿಳಿಸಿದ ಮೇರೆಗೆ ಆಂಬುಲೆನ್ಸ್ ಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆ ಹೋಬಳಿ ಸೇರಿದ ಬಿದಿರೂರು ಹೊಸ ಕಾಲೋನಿ ನಿವಾಸಿ ರಾಜು ಎಂಬುವವರು 3 ದಿನಗಳಿಂದ ಆರೋಗ್ಯ ಸರಿಯಿಲ್ಲದೆ ರಸ್ತೆ ಬದಿಯಲ್ಲಿ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಶನಿವಾರಸಂತೆ ಹೋಟೆಲ್ ಯೋಗಣ್ಣ ರವರು ಕರವೇ ತಾಲೂಕ್ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ವಿಷಯ ತಿಳಿಸಿದ ಕಾರಣ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಮಲಗಿದ್ದ ರಾಜು ಎಂಬ ವ್ಯಕ್ತಿಯನ್ನು ಆಂಬುಲೆನ್ಸ್ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲು ಸೇರಿಸಲಾಯಿತು.
ಸಂಪೂರ್ಣವಾಗಿ ಪ್ರಜ್ಞೆ ಇಲ್ಲದಂತಹ ಸ್ಥಿತಿಯಲ್ಲಿದ್ದಂತಹ ರಾಜುರವರ ಬಟ್ಟೆ ಸಂಪೂರ್ಣವಾಗಿ
ಗಲೀಜಾಗಿತ್ತು ಹಾಗಾಗಿ ಬಟ್ಟೆಯನ್ನು ಸಂಪೂರ್ಣ ಬದಲಾಯಿಸಿ ಬೇರೆ ಬಟ್ಟೆಯನ್ನು ತೊಡಸಿ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಲಾಯಿತು ಈ ಸಂದರ್ಭದಲ್ಲಿ ಶನಿವಾರಸಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉತ್ತಮವಾಗಿ ಚಿಕಿತ್ಸೆ ಕೊಟ್ಟಿರುತ್ತಾರೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ, ಸರಿಯಾದ ಸಮಯಕ್ಕೆ ಆಂಬುಲೆನ್ಸ್ (108) ಬಂದು ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ಸಹಕರಿಸಿದ ಆಂಬುಲೆನ್ಸ್ ಸಿಬ್ಬಂದಿಗಳಿಗೆ ಹಾಗೂ ಪ್ರಜ್ಞೆ ಇಲ್ಲದೆ ಮಲಗಿದ್ದ ಸ್ಥಿತಿಯಲ್ಲಿದ್ದ ವ್ಯಕ್ತಿ ಬಗ್ಗೆ ನಮಗೆ ತಿಳಿಸಿ ಹೋಟೆಲ್ ಯೋಗಣ್ಣಗೆ ಹಾಗೂ ಹೊಸ ಬಟ್ಟೆಯನ್ನು ಕೊಟ್ಟಂತಹ ಕೃಷ್ಣ ಯಶಸ್ವಿನಿ ಕಲ್ಯಾಣ ಮಂಟಪ ಇವರಿಗೂ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇನೆ ಎಂದು ಕರವೇ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಹೇಳಿದರು
More Stories
ಅನಾಥ ಅಜ್ಜಿಯನ್ನು ಅನಾಥಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೇರೆದ ಕರವೇ ಫ್ರಾನ್ಸಿಸ್ ಡಿಸೋಜಾ.
ಗೌಡಳ್ಳಿ ಗ್ರಾಮ ಪಂಚಾಯಿತಿ ಮುಂದೆ ಉದ್ಯಾನವನದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಶಿವರಾಮೇಗೌಡರ ಕರವೇ ಕಾರ್ಯಕರ್ತರಿಂದ ಮನವಿ
ಜಾನುವಾರು ಜಾತ್ರಾ ಮೈದಾನದ ಕಲಾಮಂದಿರದಲ್ಲಿ ಕಸ ಶಿವರಾಮೇಗೌಡರ ಕರವೇ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ತೀವ್ರ ವಿರೋಧ