ಮಂಡ್ಯ: ಕೊರೋನಾ ಸಂಕಷ್ಠದ ಸಮಯದಲ್ಲಿ ಹಗಲಿರುಳೆನ್ನದೇ ದುಡಿಯುತ್ತಿರುವ ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂಧಿಗಳಿಗೆ ಕೋರಮಂಡಲ್ ಸಕ್ಕರೆ ಕಾರ್ಖಾನೆಯ ಪರ್ಸೊನಲ್ ಮ್ಯಾನೇಜರ್ ಎನ್-೯೫ ಮಾಸ್ಕುಗಳನ್ನು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಿವಪ್ಪ ಅವರಿಗೆ ಹಸ್ತಾಂತರಿಸಿದರು.
ನAತರ ಮಾತನಾಡಿ ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕುವ ನಿಟ್ಟಿನಲ್ಲಿ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತರು, ಪೋಲಿಸರು, ಅಗ್ನಿಶಾಮಕ ಸಿಬ್ಬಂಧಿಗಳು ಹಗಲಿರುಳೆನ್ನದೇ ತಮ್ಮ ಜೀವವನ್ನು ಪಣಕ್ಕಿಟ್ಟು ದುಡಿಯುತ್ತಿದ್ದಾರೆ. ಆದ್ದರಿಂದ ಸಂಕಷ್ಠವನ್ನು ಲೆಕ್ಕಿಸದೇ ದುಡಿಯುತ್ತಿರುವ ಕೊರೋನಾ ವಾರಿಯರ್ಸ್ ಆರೋಗ್ಯ ಸಂರಕ್ಷಣೆಗೆ ಅತ್ಯುತ್ತಮ ಗುಣಮಟ್ಟದ ಮಾಸ್ಕುಗಳನ್ನು ವಿತರಿಸಲಾಗುತ್ತಿದೆ ಎಂದು ಪದ್ಮನಾಭ ವಿವರಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ತಜ್ಞವೈದ್ಯರಾದ ಡಾ.ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.