ಹೊನ್ನಾವರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೇಸ್ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕ ಖಂಡಿಸಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿ ಯಶ್ವಸಿಯಾಗಿ ಭಾರತ ಜೋಡೊ ಯಾತ್ರೆಯ ಬಳಿಕ ಕಾಂಗ್ರೇಸ್ ಸಂಘಟಿತವಾಗಿದ್ದು, ಬಿಜೆಪಿಯ ದುರಾಡಳಿತ ಭೃಷ್ಟಾಚಾರ ಜಗತ್ತಜ್ಜಾಹಿರಾಗಿದೆ. ಕೊಟ್ಟ ಭರವಸೆ ಈಡೇರಿಸದೇ ಕೋಮು ಭಾವನೆ ದಕ್ಕೆ ತರುವ ಕಾರ್ಯ ಇಷ್ಟು ದಿನ ಬಿಜೆಪಿ ಮಾಡುತ್ತಿತ್ತು. ಇದೀಗ ಮೋದಿಯವರನ್ನು ಟೀಕಿಸಿದ್ದಾರೆ ಎನ್ನುವ ಕಾರಣಕ್ಕೆ ಜನರಿಂದ ಆಯ್ಕೆಗೊಂಡ ಸಂಸದರನ್ನು ಅಮಾನತುಗೊಳಿಸುತ್ತಾರೆ. ಈ ಹಿಂದೆಯು ಹಲವು ಬಾರಿ ಹಲವು ಬಿಜೆಪಿ ಪಕ್ಷದ ನಾಯಕರು ಕೂಡ ಟೀಕಿಸಿದ ಅನೇಕ ಉದಾಹರಣೆಗಳಿವೆ . ನಮ್ಮ ಪಕ್ಷದ ಮಾಜಿ ಪ್ರಧಾನಿಗಳಾದ ನೆಹರು, ಇಂದಿರಾಗಾoಧಿ, ರಾಜೀವ ಗಾಂಧಿ, ಮನಮೋಹನ ಸಿಂಗ್, ಸೋನಿಯಾ ಗಾಂಧಿ, ರಾಜ್ಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಇವರನ್ನು ಕಟು ಶಬ್ದದಿಂದ ಬಿಜೆಪಿ ನಾಯಕರು ಟಿಕೀಸಿದ್ದಾರೆ. ಅವರೆಲ್ಲರನ್ನು ಹೀಗಿಯೇ ಅಮಾನತು ಮಾಡುತ್ತಾ ಹೋದರೆ ಮುಂದೊAದು ದಿನ ಲೋಕಸಭೆ ಮತ್ತು ರಾಜ್ಯ ಸಭೆ, ವಿಧಾನಸಭೆ, ವಿಧಾನಪರಿಷತನಲ್ಲಿ ಇವರ ಪಕ್ಷದವರು ಸಂಪೂರ್ಣ ಖಾಲಿಯಾಗಬೇಕಾಗಬಹುದು ಎಂದರು.
ಕೋರ್ಟ್ ತೀರ್ಪು ನೀಡಿದರೂ, ಮೆಲ್ಮನವಿಗೆ ಅವಕಾಶವಿತ್ತು. ತರಾತುರಿಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಖಂಡಿಸುತ್ತಿದ್ದು, ಈ ಬಗ್ಗೆ ಪಕ್ಷ ತಿರ್ಮಾನದಂತೆ ಜಿಲ್ಲಾ ಕಿಸಾನ್ ಕಾಂಗ್ರೇಸ್ ಪ್ರತಿಭಟನೆ ನಡೆಸುದಾಗಿ ಶಿವಾನಂದ ಹೆಗಡೆ ಕಡತೋಕಾ ಎಚ್ಚರಿಸಿದರು.
More Stories
ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಕ ಕಾಡು ಪ್ರಾಣಿ ಸಾವು
ಕಾಡಿನಲ್ಲಿ ವಾಸಮಾಡಬೇಕಾದ ಕಡವೆ ನಾಡಿನಲ್ಲಿ ಪ್ರತ್ಯಕ್ಷ
18ನೇ ವರ್ಷಕ್ಕೆ ಶೇಕಡಾ 100 ಪ್ರತಿಶತ ಫಲಿತಾಂಶ ದಾಖಲಿಸಿದ ನ್ಯೂ ಇಂಗ್ಲಿಷ ಸ್ಕೂಲ್ (ಆಂಗ್ಲಮಾಧ್ಯಮ) ಪ್ರೌಢಶಾಲೆ, ಹೊನ್ನಾವರ