ಭಟ್ಕಳ ತಾಲ್ಲೂಕಿನ ಹಿರಿಯ ಸಹಕಾರಿ ಧುರೀಣ, ರಾಜಕಾರಣಿ ಮಾವಳ್ಳಿ ಹೋಬಳಿಯ ನಾಮಧಾರಿ ಸಮಾಜದ ಮುಖಂಡರಾದ ಶಿರಾಲಿಯ ಬಿ.ಕೆ. ನಾಯ್ಕ ಅಲ್ಪ ಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದರು.
ಅವರು ಭಟ್ಕಳ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ (ಪಿ.ಎಲ್.ಡಿ.) ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದು ನಾಲ್ಕು ಬಾರಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಒಂದು ಬಾರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅತ್ಯಂತ ಸರಳ ವ್ಯಕ್ತಿತ್ವದ ಅವರು ಹಲವಾರು ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮಾವಳ್ಳಿ ಹೋಬಳಿಯ ನಾಮಧಾರಿ ಸಮಾಜದ ಅಧ್ಯಕ್ಷರಾಗಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಮಾಜಕ್ಕೆ ಉತ್ತಮ ಸೇವೆ ಸಲ್ಲಸಿದ್ದ ಅವರನ್ನು ಶ್ರೀ ಕ್ಷೇತ್ರ ಹಳೇಕೋಟೆ ಹನುಮಂತ ದೇವಸ್ಥಾನದ ಮೊಕ್ಷೇಸರರು ಹಾಗೂ ನಾಮಧಾರಿ ಅಭಿವೃದ್ದಿ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಗುರುವಾರ ದೇವಸ್ಥಾನದ ಸಭಾಭವನದಲ್ಲಿ ಮ್ರತರ ಭಾವ ಚಿತ್ರಕ್ಕೆ ಪುಷ್ಪ ಸಮರ್ಪಣೆ ಮಾಡುವುದರ ಮೂಲಕ ನುಡಿ ನಮನ ಸಲ್ಲಿಸಿ ಶ್ರದ್ದಾಂಜಲಿ ಅರ್ಪಿಸಿದರು.
ಈ ಸಂದರ್ಬದಲ್ಲಿ ಮೋಕ್ತೇಸರರಾದ ಸುಬ್ರಾಯ ನಾಯ್ಕ ಮತ್ತು ನಾಮಧಾರಿ ಅಭಿವೃದ್ದಿ ಸಂಘದ ಅಧ್ಯಕ್ಷರಾದ ಸುಬ್ರಾಯ ನಾಯ್ಕ, ಮುಖಂಡರುಗಳಾದ ಜೆ,ಜೆ,ನಾಯ್ಕ, ಕೃಷ್ಣ ನಾಯ್ಕ, ವಾಸು ನಾಯ್ಕ, ವಿ ಜೆ ನಾಯ್ಕ, ಮಂಜುನಾಥ ನಾಯ್ಕ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದು ನುಡಿ ನಮನ ಸಲ್ಲಿಸಿದರು.
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: