
ಹೊನ್ನಾವರ; ಉಡಪಿ ಶ್ರೀ ಕೃಷ್ಣ ಮಠದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೊನ್ನಾವರ ತಾಲೂಕಿನ ನೀಲಗೋಡ ಯಕ್ಷೀ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದರು.
ಪ್ರಸಿದ್ದ ದೇವಿ ಕ್ಷೇತ್ರದಲ್ಲಿ ಒಂದಾದ ತಾಲೂಕಿನ ನೀಲಗೋಡ ಯಕ್ಷೀ ಚೌಡೇಶ್ವರಿ ದೇವಾಲಯಕ್ಕೆ ಆಗಮಿಸಿದ ಶ್ರೀಗಳನ್ನು ಪೂರ್ಣಕುಂಭ ಸ್ವಾಗತ ಚಂಡೆ ವಾದನದ ಮೂಲಕ ಸ್ವಾಗತಿಸಿದರು. ದೇವಾಲಯದಲ್ಲಿ ಲೋಕಕಲ್ಯಾಣಾರ್ಥ ಮತ್ತು ಭಕ್ತರ ಒಳತಿಗಾಗಿ ನಡೆಯುವ ನವಚಂಡಿಕಾ ಯಾಗದ ಪೂರ್ಣಾಹುತಿ ನೆರವೇರಿಸಿದರು. ನಂತರ ಶ್ರೀ ಯಕ್ಷೀ ಚೌಡೇಶ್ವರಿ ದೇವರುಗಳಿಗೆ ಪೂಜೆ ನೇರವೇರಿಸಿದರು ದೇವಾಲಯದ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿಯವರು ಗುರುಗಳಿಗೆ ಪಾದಪೂಜೆ ನೆರವೇರಿಸಿದರು.
ಆರ್ಶಿವಚನ ನೀಡಿದ ಶ್ರೀಗಳು ದೇವಸ್ಥಾನಗಳಲ್ಲಿ ಮಾನಸಿಕ ನೆಮ್ಮದಿ ದೊರೆಯಲಿದೆ. ಭಕ್ತರು ಶೃದ್ದಾಭಕ್ತಿಯಿಂದ ತಮ್ಮ ಸಮಸ್ಯೆ ಹೇಳಿಕೊಂಡರೆ, ಈ ಸ್ಥಳದಲ್ಲಿ ಒಂದು ರೀತಿ ನೆಮ್ಮದಿ ಸಿಗಲಿದೆ. ಈ ದೇವಿಯ ಸನ್ನಿಧಾನದಲ್ಲಿ ನಿರಂತರವಾಗಿ ಅನೇಕ ಬಗೆಯ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ. ನಾಡಿನೆಲ್ಲಡೆಯಿಂದ ಭಕ್ತರು ಆಗಮಿಸುವ ಈ ಕ್ಷೇತ್ರ ಇನ್ನಷ್ಟು ಪ್ರಸಿದ್ದವಾಗಲಿ. ಭಕ್ತರ ಬಯಕೆ ಈಡೇರುವ ಮೂಲಕ ಸಕಲ ಇಷ್ಟಾರ್ಥಗಳು ನೇರವೇರಲಿ ಎಂದು ಆರ್ಶಿವದಿಸಿದರು. ದೇವಾಲಯದ ಪ್ರದಾನ ಅರ್ಚಕ ಮಾದೇವ ಸ್ವಾಮಿ ಸಾವಿರಾರು ಸಂಖ್ಯೆ ಭಕ್ತರು ಪಾಲ್ಗೊಂಡಿದ್ದರು.
More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ