ಭಟ್ಕಳ ; ಪ್ರತಿಷ್ಟಿತ ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಉಪಾಧ್ಯಕ್ಷರಾಗಿ ಪರಮೇಶ್ವರ ದೇವಡಿಗ ಅವಿರೋಧವಾಗಿ ಆಯ್ಕೆಯಾದರು.
ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಶನಿವಾರ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಈ ಹಿಂದಿನ ಅವಧಿಯಲ್ಲೂ ಸಹ ಮಂಕಾಳ ವೈದ್ಯ ಅಧ್ಯಕ್ಷ ಹಾಗೂ ಪರಮೇಶ್ವರ ದೇವಡಿಗ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಇತ್ತೀಚೆಗೆ ಸೊಸೈಟಿಯ ೧೩ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಚಿವ ಮಂಕಾಳ ವೈದ್ಯರ ನೇತೃತ್ವದ ತಂಡವೇ ಪುನಾಯ್ಕೆಯಾಗಿತ್ತು. ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಚುನಾವಣಾಧಿಕಾರಿಯಾಗಿ ಕಾರವಾರದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸುಮನಾ ನಾಯ್ಕ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಸೊಸೈಟಿಯ ಎಲ್ಲಾ ನಿರ್ದೇಶಕರು, ಪ್ರಭಾರೆ ಪ್ರಧಾನ ವ್ಯವಸ್ಥಾಪಕ ನಾಗೇಶ ದೇವಡಿಗ ಮುಂತಾದವರಿದ್ದರು. ಅಧ್ಯಕ್ಷ-ಉಪಾಧ್ಯಕ್ಷರಿಗೆ ನಿರ್ದೇಶಕರು, ಅವರ ಅಭಿಮಾನಿಗಳು ಹೂವಿನ ಮಾಲೆ ಹಾಕಿ ಶುಭ ಹಾರೈಸಿದರು.
More Stories
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್