
ಯಲ್ಲಾಪುರ: ಅರಣ್ಯ ಭೂಮಿ ಹೋರಾಟಕ್ಕೆ ಜಾತಿ, ಧರ್ಮ, ಪಕ್ಷವಿಲ.್ಲ ಅರಣ್ಯವಾಸಿಗಳ ಹಿತ ಕಾಪಾಡುವುದು ಹೋರಾಟಗಾರರ ವೇದಿಕೆ ಮೂಲ ಉದ್ದೇಶ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.
ಅವರು ಗುರುವಾರ ಯಲ್ಲಾಪುರ ವೆಂಕಟ್ರಮಣ ದೇವಸ್ಥಾನದ ಆವರಣದಲ್ಲಿ ಜರುಗಿದ ಅರಣ್ಯವಾಸಿಗಳ ಬೃಹತ್ ಸಭೆಯಲ್ಲಿ ಅರಣ್ಯವಾಸಿಗಳಿಗೆ ಗುರುತಿನ ಪತ್ರವಿತರಣೆ ಮಾಡುತ್ತಾ ಮಾತನಾಡಿದರು.
ಸಪ್ಟೆಂಬರ್ 14 ರಂದು ಬೆಂಗಳೂರಿನಲ್ಲಿ ನಡೆಯುವ ಲಕ್ಷವೃಕ್ಷ ಗಿಡ ನೆಡುವ ಅಭಿಯಾನದ ಛಾಯಾಚಿತ್ರ ಪ್ರದರ್ಶನ ಮತ್ತು ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸಮಾಲೋಚನಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿಅರಣ್ಯ ಅತಿಕ್ರಮಣದಾರರು ಆಗಮಿಸಬೇಕೆಂದು ಅವರು ಕರೆ ನೀಡಿದರು.
ಸಭೆಯಲ್ಲಿ ತಾಲೂಕ ಅಧ್ಯಕ್ಷ ಭೀಮ್ಸಿ ವಾಲ್ಮೀಕಿ ಅಧ್ಯಕ್ಷತೆಯನ್ನ ವಹಿಸಿದ್ದರು. ಸೀತಾರಾಮ ನಾಯ್ಕ ಕುಂದರಗಿ, ಮಹೇಶ್ ಮರಾಠಿ ಆನಗೋಡ, ಅನಂತ ಗೌಡ ಮಾವಿನಮನೆ, ಚನ್ನಪ್ಪ ಗೌಡ, ಗೋಪಾಲಕೃಷ್ಣ ಹೆಗಡೆ ನಂದೊಳ್ಳಿ, ರಾಜಾ ಸಾಬ ಮದನೂರು ಮುಂತಾದವರು ಮಾತನಾಡಿದರು, ವೇದಿಕೆಯ ಮೇಲೆ ಕೇಶವ ಕುಣಬಿ, ಈರಪ್ಪ ಮೊಪಣ್ಣನವರ, ಶ್ರೀಧರ ನಾಯ್ಕ ಚಳಗೇರಿ, ಸುಬ್ಬು ಬೈಲಪಡೆ, ಶೇಖರ್ ನಾಯ್ಕ ಹಿತ್ಲಳ್ಳಿ ಮುಂತಾದವರು ಉಪಸ್ಥಿತರಿದ್ದರು. ಭಾಸ್ಕರ ಗೌಡ ಹಿತ್ಲಳ್ಳಿ ಸ್ವಾಗತಿಸಿದರು, ಗಣಪತಿ ಗೌಡ ಅವರು ವಂದಿಸಿದರು.
ಜಿಲ್ಲೆಯಲ್ಲಿ 69,733 ಅರ್ಜಿ ತೀರಸ್ಕಾರ:
ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ 85,757 ಅರ್ಜಿಗಳು ಅರಣ್ಯವಾಸಿಗಳು ಸಲ್ಲಿಸಿದ್ದು, ಅವುಗಳಲ್ಲಿ 69,733 ಅರ್ಜಿಗಳು ತೀರಸ್ಕಾರವಾಗಿದ್ದು ಕೇವಲ 2,855 ಅರ್ಜಿಗಳಿಗೆ ಮಾತ್ರ ಕಾನೂನು ಮಾನ್ಯತೆ ಹಕ್ಕು ದೊರಕಿದೆ ಎಂದು ಅಧ್ಯಕ್ಷರವೀಂದ್ರನಾಯ್ಕ ಹೇಳಿದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ