ಭಟ್ಕಳ: ಜಗತ್ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರಕ್ಕೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಹೀಗೆ ಬಂದ ಪ್ರವಾಸಿಗರಿಗೆ ವಾಹನ ನಿಲ್ಲಿಸಲು ಸ್ಥಳವಿಲ್ಲದೇ ನೇರವಾಗಿ ಸಮುದ್ರಕ್ಕೆ ವಾಹನಗಳನ್ನು ಕೊಂಡೊಯ್ಯುತ್ತಿದ್ದು, ಇದು ಕಡಲ ಸೌಂದರ್ಯ ಆಸ್ವಾದಿಸಲು ಬರುವವರ ಕಿರಿ ಕಿರಿಗೆ ಕಾರಣವಾಗಿದೆ.
ವರ್ಷಾಂತ್ಯದ ಕಾರಣ ಕಳೆದ ಹದಿನೈದು ದಿನಗಳಿಂದ ನಿತ್ಯ ಸಾವಿರಾರು ಜನ ಪ್ರವಾಸಿಗರು ಮುರುಡೇಶ್ವರಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಇಲ್ಲಿ ಬರುವ ಪ್ರವಾಸಿಗರು ವಾಹನ ನಿಲುಗಡೆ ಮಾಡುವುದೇ ಬಹುದೊಡ್ಡ ಸಮಸ್ಯೆ ಆಗಿದೆ. ಎಲ್ಲಿಯೂ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಅನಿವಾರ್ಯವಾಗಿ ಪ್ರವಾಸಿಗರು ಬಿಚ್ ನಲ್ಲಿ ವಾಹನ ನಿಲುಗಡೆ ಮಾಡುವ ಪರಿಸ್ಥಿತಿ ಉಂಟಾಗಿದೆ.
ಬೀಚ್ನಲ್ಲಿ ಎಂಜಾಯ್ ಮಾಡುವ ಸಂದರ್ಭದಲ್ಲಿಯೇ ವಾಹನಗಳು ಓಡಾಟ ಮಾಡುವುದರಿಂದ ಪ್ರವಾಸಿಗರಿಗೂ ಕಿರಿ ಕಿರಿ ಉಂಟಾಗುತ್ತಿದೆ. ಕಡಲತೀರದಲ್ಲೇ ವಾಹನಗಳ ಪಾರ್ಕಿಂಗ್ ಮಾಡಲಾಗುತ್ತಿದ್ದು, ಅನೇಕ ಬಾರಿ ವಾಹನಗಳು ಮರಳಿನಲ್ಲಿ ಹುದುಗಿ ಪ್ರವಾಸಿಗರು ತೊಂದರೆಪಟ್ಟಿದ್ದೂ ಇದೆ. ಆದರೆ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದ್ದ ಪ್ರವಾಸೋದ್ಯಮ ಇಲಾಖೆ ಮಾತ್ರ ಮೌನ ವಹಿಸಿದ್ದು, ಈ ಬಗ್ಗೆ ಕೇಳಿದ್ರೆ ತಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಾರೆ.
ಒಟ್ಟಿನಲ್ಲಿ ಇನ್ನಾದರೂ ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ ಕ್ರಮ ಕೈಗೊಂಡು, ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬರುವವರಿಗೆ ಸೌಕರ್ಯ ಕಲ್ಪಿಸಿಕೊಡಬೇಕಿದೆ.
More Stories
ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಒಲಿಂಪಿಯಾಡ ಪದಕ ವಿತರಣ ಸಮಾರಂಭ:
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ: