ಬೆoಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು ದಾಖಲೆಯ ೧೮೭ ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ೩೪೦೮ಕ್ಕೆ ಏರಿಕೆಯಾಗಿದೆ. ಇವರಲ್ಲಿ ೧೩೨೮ ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ ೨೦೨೬ ಆಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರ -೨೮, ಕಲಬುರ್ಗಿ-೨೪, ಮಂಡ್ಯ -೧೫, ಉಡುಪಿ – ೭೩, ಹಾಸನ – ೧೬, ಬೀದರ್ – ೦೨, ಚಿಕ್ಕಬಳ್ಳಾಪುರ-೦೫, ದಕ್ಷಿಣ ಕನ್ನಡ -೦೪, ವಿಜಯಪುರ-೦೧, ಬಾಗಲಕೋಟೆ-೦೨, ಬಳ್ಳಾರಿ -೦೩, ಶಿವಮೊಗ್ಗ-೦೯, ಧಾರವಾಡ-೦೨, ಕೋಲಾರ ೦೧, ಹಾವೇರಿ- ೧, ರಾಮನಗರ -೦೧ ಕೊರೋನಾ ಸೋಂಕು ತಗಲುವ ಮೂಲಕ ಇಂದು ೧೮೭ ಜನರಿಗೆ ಕೊರೋನಾ ದೃಢಪಟ್ಟಿದೆ. ಅಲ್ಲದೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ೩೪೦೮ಕ್ಕೆ ಏರಿಕೆಯಾದ್ರೇ, ೧೩೨೮ ಜನ ಕೊರೋನಾ ಸೋಂಕಿತರು ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತ ಸಕ್ರೀಯ ಜನರ ಸಂಖ್ಯೆ ೨೦೨೬ ಆಗಿದೆ. ಇಂದು ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಸಾವನ್ನಪ್ಪುವ ಮೂಲಕ, ರಾಜ್ಯದಲ್ಲಿ ಸಾವಿನ ಸಂಖ್ಯೆ ೫೨ಕ್ಕೆ ಏರಿಕೆಯಾಗಿದೆ.
More Stories
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ