ಭಟ್ಕಳ : 31.07.2024ರ ಅವಧಿಯಲ್ಲಿ ಸೇವೆಯಿಂದ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅಥವಾ ಸೇವೆಯಲ್ಲಿರುವುದು ಸಮಾಪ್ತಿಗೊಂಡ ಸರ್ಕಾರಿ ಪ್ರಕರಣಗಳಲ್ಲಿ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿಗದಿಪಡಿಸಲಾದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಲೆಕ್ಕ ಹಾಕುವ ಉದ್ದೇಶಗಳಿಗಾಗಿ ಪರಿಗಣಿಸತಕ್ಕದ್ದು. ಆದರೆ ಸದರಿ ಕಾಲ್ಪನಿಕ ಪುನರ್ ನಿಗದಿಯ ಆರ್ಥಿಕ ಲಾಭವು ನಿವೃತ್ತಿ ಹೊಂದಿದ ಸರ್ಕಾರಿ ನೌಕರನಿಗೆ ಅಥವಾ ಮರಣ ಹೊಂದಿದ ಸರ್ಕಾರಿ ನೌಕರನ ಫಲಾನುಭವಿಗೆ ಸಂದರ್ಭಾನುಸಾರ ದಿನಾಂಕ: 01.08.2024 ರಿಂದ ಪ್ರಾಪ್ತವಾಗತಕ್ಕದ್ದು”.ಈ ಆದೇಶದನ್ವಯ ದಿನಾಂಕ: 01-07-2022 ರಿಂದ 31-07-2024ರವರೆಗೆ (25 ತಿಂಗಳ ಅವಧಿಯಲ್ಲಿ) ನಿವೃತ್ತರಾದ/ನಿಧನ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ ವೇತನದನ್ವಯ ಲೆಕ್ಕಾಚಾರ ಮಾಡದೆ ಹಳೆಯ ವೇತನ ಶ್ರೇಣಿಯ ಮೇಲೆಯೇ ಪರಿಗಣಿಸುತ್ತಿರುವುದು ನಿವೃತ್ತಿ ಜೀವನ ಸಂಧ್ಯಾಕಾಲದಲ್ಲಿರುವ ನಮ್ಮಗಳಿಗೆ ಅತೀವ ಅಘಾತವಾಗಿರುತ್ತದೆ. ನಮ್ಮದಲ್ಲದ ಕಾರಣದಿಂದ ಆಗಸ್ಟ್ 2024ರಿಂದ ನಿವೃತ್ತಿ ಹೊಂದುವ ಅಧಿಕಾರಿ/ನೌಕರರು ಪರಿಷ್ಕೃತ ವೇತನದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯವು ಲಭ್ಯವಾಗುತ್ತಿದ್ದು, ಅವರಂತೆ ನಾವುಗಳೂ ಸಹ 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯಗಳನ್ನು ಪಡೆಯುವ ಅರ್ಹತೆ ಹೊಂದಿದ್ದೇವೆ.
ಆದ್ದರಿAದ ನಮಗೆ ಆಗುತ್ತಿರುವ ಆರ್ಥಿಕ ನಷ್ಟವನ್ನು ಅರ್ಥ ಮಾಡಿಕೊಂಡು ದಯಮಾಡಿ ಮೇಲಿನ ಅವಧಿಯಲ್ಲಿ ನಿವೃತ್ತರಾದವರಿಗೆ ಸಹ ಪರಿಸ್ಕ್ರತ ಮೂಲ ವೇತನದ ಮೇಲೆ ಲೆಕ್ಕಾಚಾರ ಮಾಡಿ ನ್ಯಾಯಯೋಜಚಿತವಾಗಿ ಲಭ್ಯವಾಗುವ ಆರ್ಥಿಕ ಸೌಲಭ್ಯವನ್ನು ದೊರಕಿಸಿ ಕೊಡಲು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
More Stories
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ.
ಧರಣಿಯನ್ನು ಕೈ ಬಿಡುವಂತೆ ಪ್ರತಿಭಟಕಾರರ ಮನವಲಿಸಲು ಪ್ರಯತ್ನಿಸಿದ ಸಹಾಯಕ ಆಯುಕ್ತೆ ಡಾ. ನಯನ
ತುಳುನಾಡಿನ ಕಾರಣೀಕ ಮೆರೆದ ಕಲ್ಜಿಗ ಸಿನೇಮಾ, ಕಾಂತಾರದ ಬೆನ್ನಿಗೇ ಮತ್ತೊಂದು ಕಲಾತ್ಮಕ ಚಿತ್ರ ಕೊಟ್ಟ ಕರಾವಳಿ