ಯಲ್ಲಾಪುರ: ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಶಿರ್ಲೆ ಸಮೀಪ ಟೈಲ್ಸ್ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ೬೩ ರ ರಲ್ಲಿ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಮಾರ್ಗವಾಗಿ ಟೈಲ್ಸಗಳನ್ನು ತುಂಬಿಕೊAಡು ಹೊರಟ್ಟಿದ್ದ ಲಾರಿ ರಸ್ತೆಯಲ್ಲಿ ಬಿದ್ದಿರುವ ಹೊಂಡವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಘಾತದಿಂದಾಗಿ ರಸ್ತೆಯ ತುಂಬೆಲ್ಲ ಟೈಲ್ಸ ಚೆಲ್ಲಾಪಿಲ್ಲಿಯಾಗಿದ್ದು ಇದರಿಂದ ಸ್ವಲ್ಪ ಕಾಲ ಸಂಚಾರದಲ್ಲಿ ವ್ಯತ್ಯವಯ ಉಂಟಾಯಿತು. ಕೂಡಲೇ ಸ್ಥಳಕ್ಕಾಗಮಿಸಿದ ಪೋಲಿಸರು ರಸ್ತೆಯಲ್ಲಿ ಬಿದ್ದಿದ್ದ ಟೈಲ್ಸ ಮತ್ತು ವಾಹನವನ್ನು ತೆರವುಗೊಳಿಸಿ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಯಲ್ಲಾಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ