April 30, 2024

Bhavana Tv

Its Your Channel

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಅನಿವಾಸಿ ಉದ್ಯಮಿ ಶಿರೂರಿನ ಮಣೆಗಾರ್ ಮೀರಾನ್ ಸಾಹೇಬ್‌

ಶಿರೂರು: ಶಿರೂರಿನ ಅಭಿವೃದ್ದಿಯಲ್ಲಿ ಹಗಲಿರುಳು ತೊಡಗಿಸಿಕೊಂಡು ಜಾಗತಿಕ ಮಟ್ಟದಲ್ಲಿ ಅಪಾರ ಕೊಡುಗೆ ನೀಡಿದ ಅನಿವಾಸಿ ಉದ್ಯಮಿ ಮಣೆಗಾರ್ ಮೀರಾನ್ ಸಾಹೇಬ್ ಶಿರೂರು ಇವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ.ಮಣೆಗಾರ್ ಮೀರಾನ್ ಸಾಹೇಬ್ ಇವರು ಶಿರೂರು ಕಳೆದ 40 ವರ್ಷಗಳಿಂದ ಗಲ್ಪ್ ರಾಷ್ಟ್ರಗಳಲ್ಲಿ ಕನ್ನಡದ ನಾಡು ನುಡಿಯ ಸೇವೆ ಮಾಡಿದ್ದಾರೆ.

ಶಿಕ್ಷಣ,ಸಾಮಾಜಿಕ,ಸಾಂಸ್ಕ್ರತಿಕ ಸೇರಿದಂತೆ ಹೊರನಾಡಿನಲ್ಲಿ ಪ್ರತಿ ವರ್ಷ ಕನ್ನಡಿಗರ ಸಂಘಟನೆಗೆ ಮತ್ತು ಕನ್ನಡದ ಅಭಿವೃದ್ದಿಗಾಗಿ ವಿವಿಧ ಸಂಘ ಸಂಸ್ಥೆಗಳ ಜವಬ್ದಾರಿ ಆದ್ಯತೆಯ ಮೇರೆಗೆ ಅನುಪಮ ಕೊಡುಗೆ ನೀಡಿದ್ದಾರೆ.ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್, ಶಿರೂರು ಅಸೋಸಿಯೇಶನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.ವಿದೇಶದಲ್ಲಿ ಮಾತ್ರವಲ್ಲದೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಜನಪರ ಕಾಳಜಿಯ ಕಾರ್ಯಕ್ರಮ ಸಂಘಟಿಸುವ ಜೊತೆಗೆ ನೂರಾರು ಬಡ ಕುಟುಂಬಗಳಿಗೆ ನೆರವಾಗಿದ್ದಾರೆ.ಇದೇ ಮೊದಲ ಬಾರಿಗೆ ಶಿರೂರಿನ ವ್ಯಕ್ತಿಯೊಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದ್ದು ಶಿರೂರು ಗ್ರೀನ್‌ವ್ಯಾಲಿ ಸಂಸ್ಥೆಯ ಟ್ರಸ್ಟಿಯಾಗಿದ್ದಾರೆ ಮತ್ತು ಶಿರೂರಿನ ಅಭಿವೃದ್ದಿಗೆ ಅಂಬುಲೆನ್ಸ್ ಕಸದ ವಾಹನ ಸೇರಿದಂತೆ ಹಲವು ಮಹತ್ತರ ಕೊಡುಗೆ ನೀಡಿದ್ದಾರೆ.

error: