April 30, 2024

Bhavana Tv

Its Your Channel

ಭೀಕರ ಅಪಘಾತಕ್ಕೆ ಸುಟ್ಟು ಕರಕಲಾದ ಬಸ್ – ಕಂಟೈನರ್ : ಕಂಟೈನರ್ ಚಾಲಕ ಸಜೀವ ದಹನ

ನೆಲ್ಯಾಡಿ : ಬಸ್ ಹಾಗೂ ಕಂಟೈನರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಸ್ ಹಾಗೂ ಕಂಟೈನರ್ ಬೆಂಕಿಯ ಕೆನ್ನಾಲಗೆಗೆ ಸುಟ್ಟು ಕರಕಲಾಗಿದ್ದು, ಕಂಟೈನರ್ ಚಾಲಕ ಸಜೀವವಾಗಿ ದಹನವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ನಡೆದಿದೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಹಾಸನ ಕಡೆಯಿಂದ ಬರುತ್ತಿದ್ದ ಕಂಟೈನರ್ ಮಣ್ಣಗುಂಡಿ ಸಮೀಪಕ್ಕೆ ಬರುತ್ತಿದ್ದಂತೆಯೇ ಪರಸ್ಪರ ಡಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಮೆ ಒಮ್ಮೆಲೇ ಎರಡು ವಾಹನಗಳಿಗೆ ಬೆಂಕಿ ಹತ್ತಿಕ್ಕೊಂಡಿದೆ. ಕಂಟೈನರ್ ಚಾಲಕ ಹೊರಬರಲಾಗದೆ ಸಜೀವ ದಹನವಾಗಿದ್ದಾನೆ. ಇನ್ನು ಬಸ್‌ನಲ್ಲಿದ್ದ ಸುಮಾರು 30 ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ದುರ್ಗಾಂಬಾ ಹೆಸರಿನ ಬಸ್ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ಸಿನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದು, ರಾತ್ರಿ 12.30ರಿಂದ 1 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಕಂಟೈನರ್ ನಲ್ಲಿ ಗ್ಯಾಸ್ ಬಳಕೆ ಮಾಡಲಾಗುತ್ತಿದ್ದು, ಅಪಘಾತದ ತೀವ್ರತೆಗೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿ ಉರಿದು ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಪರಿಶೀಲನೆಯನ್ನು ನಡೆಸುತ್ತಿದ್ದಾರೆ

error: