ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ರ್ಭಟಿಸಿದೆ. ಕಳೆದ ೨೪ ಗಂಟೆಯಲ್ಲಿ ರಾಜ್ಯಾಧ್ಯಂತ ೧೫,೭೮೫ ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಇಂದು ಕಿಲ್ಲರ್ ಕೊರೋನಾ ಅಟ್ಟಹಾಸ ಮೆರೆದಿದ್ದು, ಕಳೆದ ೨೪ ಗಂಟೆಯಲ್ಲಿ ೧೪೬ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ ೧೧,೭೬,೮೫೦ ಕ್ಕೆ ಏರಿಕೆಯಾಗಿದೆ.
ಇನ್ನು ಕೊರೋನಾಗೆ ರಾಜ್ಯದಲ್ಲಿಂದು ಬರೋಬ್ಬರಿ ೧೪೬ ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ರಾಜ್ಯದಲ್ಲಿ೧೩೪೯೭ ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಕಳೆದ ೨೪ ಗಂಟೆಯಲ್ಲಿ ೯೭ ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ೫೨೨೦ ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು ಕೋವಿಡ್ ನಿಂದ ಗುಣಮುಖರಾಗಿ ೭೦೯೮ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ೧೦,೨೧,೨೫೦ ಸೋಂಕಿತರು ಸಂಪರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚರ್ಜ್ ಆಗಿದ್ದಾರೆ.
ಇನ್ನು ರಾಜ್ಯದಲ್ಲಿ ೧,೪೨,೦೮೪ ಸಕ್ರೀಯ ಸೋಂಕಿತರು ಇರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.
More Stories
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ