April 25, 2024

Bhavana Tv

Its Your Channel

ವಿದ್ಯಾವರ್ಧಕ ಸಂಘದ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಮತಗಿ ಪಟ್ಟಣದ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದ ಅವರು ಪಾಶ್ಚಿಮಾತ್ಯ ದೇಶಗಳಿಂದ ಬರುವ ಯಾವುದೇ ವಸ್ತುಗಳನ್ನು ತೆಗೆದುಕೊಳ್ಳಲು ಮೊದಲು ಯೋಚಿಸಿ ಆಮೇಲೆ ತೆಗೆದುಕೋ, ಆದರೆ ಭಾರತ ದೇಶದಿಂದ ಬರುವ ಯಾವುದೇ ವಸ್ತುಗಳನ್ನು ಮೊದಲು ತೆಗೆದುಕೊಂಡು ಆಮೇಲೆ ಯೋಚಿಸು ಎಂದು ಸ್ವಾಮಿ ವಿವೇಕಾನಂದರ ಮಾತುಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಘದ ಆವರಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಯೋಗಾಭ್ಯಾಸ ಮಾಡಿದರು.

ಈ ಸಂದರ್ಭದಲ್ಲಿ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಸಹ ಕಾರ್ಯದರ್ಶಿಗಳಾದ ವಿದ್ಯಾಧರ ಮಳ್ಳಿ, ಶಾಲಾ-ಕಾಲೇಜುಗಳ ಶಿಕ್ಷಕರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

ವರದಿ ನಿಂಗಪ್ಪ ಕಡ್ಲಿಮಟ್ಟಿ ಕಮತಗಿ

error: