March 29, 2024

Bhavana Tv

Its Your Channel

ಗುಳೇದಗುಡ್ಡ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ

ಬಾಗಲಕೋಟೆ: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ದರ ಏರಿಕೆ, ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಗದಾ ಪ್ರಹಾರ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುಳೇದಗುಡ್ಡ ನಗರದಲ್ಲಿ ಸೈಕಲ್ ಜಾಥಾ ಮಾಡುವ ಮೂಲಕ ಪ್ರತಿಭಟಿಸಲಾಯಿತು. ಇದೇ ಸಂದರ್ಭದಲ್ಲಿ ಗುಳೇದಗುಡ್ಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜು ಜವಳಿ, ಕೆಪಿಸಿಸಿ (ಹಿಂ.ವ.ವಿ) ರಾಜ್ಯ ಕಾರ್ಯದರ್ಶಿಗಳಾದ ಮಹೇಶ ಎಸ್ ಹೊಸಗೌಡ್ರ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಮ್ ಜಿ ಕಿತ್ತಲಿ, ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಭೀಮಸೇನ ಚಿಮ್ಮನಕಟ್ಟಿ, ಗುಳೇದಗುಡ್ಡ ಪುರಸಭೆ ಉಪಾಧ್ಯಕ್ಷೆ ಶರೀಫಾ ಮಂಗಳೂರು , ಪುರಸಭೆ ಸದಸ್ಯರಾದ ರಾಜು ಹೆಬ್ಬಳ್ಳಿ, ಪುರಸಭೆ ಸದಸ್ಯರಾದ ಯಲ್ಲಪ್ಪ ಮನ್ನಕಟ್ಟಿ, ಪುರಸಭೆ ಸದಸ್ಯೆ ವಿದ್ಯಾ ಮುರಗೋಡ , ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಮುಬಾರಕ ಮಂಗಳೂರು, ಕೆಪಿಸಿಸಿ ಸದಸ್ಯರಾದ ಸಲೀಂ ಮೊಮಿನ್ ಯೂಥ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ್ ಕಾಂಬಳೆ, ಅನೇಕ ಮುಖಂಡರು ಸೈಕಲ್ ಜಾಥಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ

error: