April 25, 2024

Bhavana Tv

Its Your Channel

ಸಿದ್ದರಾಮಯ್ಯ ರವರ ಕಛೇರಿಯಲ್ಲಿ ಡಾ. ಅಭಿನವ ಸಂಗನಬಸವ ಮಹಾಸ್ವಾಮಿಯವರಿಗೆ ಶ್ರದ್ಧಾಂಜಲಿ ಸಭೆ

ಬಾದಾಮಿ ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯ ರವರ ಕಛೇರಿಯಲ್ಲಿ ಡಾ. ಅಭಿನವ ಸಂಗನಬಸವ ಮಹಾಸ್ವಾಮಿಗಳು ನಿಧನರಾದ ಪ್ರಯುಕ್ತ ಎಲ್ಲಾ ಮುಖಂಡರು ಶ್ರದ್ಧಾಂಜಲಿ ಸಭೆ ಮಾಡಲಾಯಿತು, ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಶ್ರೀಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕೊಡುಗೆಗಳನ್ನು ಸ್ಮರಿಸಿದ್ದಾರೆ.

ಹಂಪಿ ಹೇಮಕೂಠ, ಬಳ್ಳಾರಿ ಮತ್ತು ಹಾಲಕೆರೆಮಠ, ಬಾದಾಮಿ ಶಿವಯೋಗ ಮಂದಿರದ ಅಧ್ಯಕ್ಷರು, ಜಗದ್ಗುರುಗಳು ಆದ ಡಾ. ಅಭಿನವ ಸಂಗನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಶ್ರೀಗಳು ವಿವಿಧ ರಂಗಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವ ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಾಗಿ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿದ್ದರು. ನಾಡಿನ ಬಡವರು, ಸೌಲಭ್ಯ ವಂಚಿತ ಜನರ ಬಗೆಗೆ ಅಪಾರ ಕಾಳಜಿ ಹೊಂದಿದ್ದ ಶ್ರೀಗಳು ಅವರ ಕಲ್ಯಾಣಕ್ಕಾಗಿ ದೀರ್ಘಕಾಲದಿಂದ ಶ್ರಮಿಸುತ್ತಾ ಬಂದಿದ್ದರು. ಅವರ ಹಠಾತ್ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಹೊಳಬಸು ಶೆಟ್ಟರಪಿ.ಆರ್.ಗೌಡರ,ಮಂಜು ಹೊಸಮನಿ,ಹನಮಂತ ದೇವರಮನಿ,ಹನಮಂತ ಅಪ್ಪಣ್ಣವರ,ನಾಗಪ್ಪ ಅಡಪಟ್ಟಿ, ಬೇಲೊರಪ್ಪನವರ,ರೇವಣಸಿದ್ದಪ್ಪ ನೋಟಗಾರ,ಶಶಿ ಉದಗಟ್ಟಿ,ಶರಣಪ್ಪ ತಮಿನಾಳ,ಬೀರಪ್ಪ ಹನಮಸಾಗರ,ಶೊರಪ್ಪ ಕೊಪ್ಪಣ್ಣವರ,ಮಹೇಶ ದೇವರಮನಿ ಇತರ ಮುಖಂಡರು ಭಾಗವಹಿಸಿದ್ದರು

ವರದಿ:- ರಾಜೇಶ್.ಎಸ್. ದೇಸಾಯಿ ಬಾದಾಮಿ

error: