May 4, 2024

Bhavana Tv

Its Your Channel

ಸ್ಫೂರ್ತಿ ಗೋಟರ್ ಮತ್ತು ಪವಿತ್ರಾ ಗೌಡರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಇಳಕಲ್- ಸ್ಥಳಿಯ ಶ್ರೀ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚುನಾವಣಾ ಆಯೋಗದ ಮತದಾರರ ಸಾಕ್ಷರತಾ ಘಟಕ ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಮತ್ತು ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಕುಮಾರಿ ಸ್ಪೂರ್ತಿ ಗೋಟೂರ್ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಮತ್ತು ಕುಮಾರಿ ಪವಿತ್ರಾ ಗೌಡರ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತಿಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಬಿ.ಬಿ.ಸುಗ್ಗಮದ ತಿಳಿಸಿದ್ದಾರೆ .

ಜಿಲ್ಲಾ ಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎಸ್.ವಿ.ಎಂ.ವಿ.ವ. ಸಂಘದ ಚೇರಮನ್ ಎಂ.ವಿ.ಪಾಟೀಲ,ಪ್ರಧಾನ ಕಾರ್ಯದರ್ಶಿ ಎ.ವಿ.ಬಿಜ್ಜಲ ಹಾಗೂ ಮಹಾವಿದ್ಯಾಲಯದ ಚೇರಮನ್ನ ಶರಣಪ್ಪ ಅಕ್ಕಿ ಹಾಗೂ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ವರದಿ:ವಿನೋದ ಬಾರಿಗಿಡದ ಇಳಕಲ್

error: