ಬೆಂಗಳೂರು: ಹಿರಿಯ ಸಾಹಿತಿ, ಚಿಂತಕ, ಪತ್ರಕರ್ತ, ಪ್ರಕಾಶಕ ಉದಯ ಧರ್ಮಸ್ಥಳ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕಂಬನಿ ಮಿಡಿದಿದ್ದಾರೆ.
ಆಧ್ಯಾತ್ಮಿಕ ಚಿಂತಕರು ಹಾಗೂ ವಾಗ್ಮಿಗಳು ಆಗಿದ್ದ ಉದಯ ಧರ್ಮಸ್ಥಳ ಅವರು “ಸನಾತನ ಸಾರಥಿ” ಪತ್ರಿಕೆಯನ್ನು ಆರಂಭಿಸಿ, ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಕನ್ನಡ ಪರ ಚಿಂತನೆ ನಿಲುವು ಆದರ್ಶಯುತವಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆಯಲ್ಲಿ ನಿಕಟ ಸಂಪರ್ಕವನ್ನು ಹೊಂದಿದ್ದ ಅವರು ಕನ್ನಡ ಉಳಿಸಿ ಬೆಳೆಸುವಲ್ಲಿ ಸದಾ ಕ್ರಿಯಾಶೀಲರಾಗಿದ್ದರು.
ವೈಯಕ್ತಿಕವಾಗಿ ನನ್ನೊಂದಿಗೆ ಆತ್ಮೀಯ ಸಂಬAಧ ಹೊಂದಿದ್ದ ಉದಯ ಧರ್ಮಸ್ಥಳ ಅವರು ನಾನು ದೂರದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅನೇಕ ಅರ್ಥಪೂರ್ಣ, ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು ಎಂದು ನಾಡೋಜ ಡಾ. ಮಹೇಶ ಜೋಶಿ ನೆನಪು ಮಾಡಿಕೊಂಡಿದ್ದಾರೆ.
ಉದಯ ಧರ್ಮಸ್ಥಳ ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಉದಯರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿಸಂತಾಪ ಸೂಚಿಸಿದ್ದಾರೆ.
More Stories
ಭಾರತೀಯ ಜನತಾ ಪಾರ್ಟಿಯ ವೃತ್ತಿಪರರ ಪ್ರಕೋಷ್ಠದ ರಾಜ್ಯ ಸಹ-ಸಂಚಾಲಕರನ್ನಾಗಿ ಕೆ.ಆರ್. ವೆಂಕಟೇಶ್ಗೌಡ, ಬೆಂಗಳೂರು, ನೇಮಕ
ಸುವರ್ಣ ಸಾಧಕ ಪ್ರಶಸ್ತಿ ಸ್ವೀಕರಿಸಿದ ಅನಂತಮೂರ್ತಿ ಹೆಗಡೆ
ನ್ಯಾಷನಲ್ ಎಜುಕೇಷನ್ ಸೊಸೈಟಿಯಿಂದ ಡಿ 8 ಮತ್ತು 9 ರಂದು ಎನ್.ಇ.ಎಸ್ ಸೂಪರ್ ನೋವಾ ಒಂದು ಶೈಕ್ಷಣಿಕ ಮೇಳ