ಬೆಂಗಳೂರು: ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಸಿಬಿಐನಿಂದ ಮರು ತನಿಖೆ ಮಾಡಿಸುವಂತೆ ಪರೇಶ್ ಮೆಸ್ತಾ ತಂದೆ ಕಮಾಲಾಕರ್ ಮೇಸ್ತ ಒತ್ತಾಯಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಕಮಲಾಕರ್ ಮೇಸ್ತ, ನನ್ನ ಮಗನ ಸಾವು ಅಸಹಜ ಸಾವಾಗಿದೆ ಎಂದು ಸಿಎಂ ಬಳಿ ಅಳಲುತೋಡಿಕೊಂಡಿದ್ದಾರೆ. ಸಿಬಿಐಗೆ ಸಾಕ್ಷಾಧಾರಗಳು ಲಭ್ಯ ಆಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಎಂದು ಆರೋಪಿಸಿದ್ದಾರೆ.
ಸಿಬಿಐ ಬಿ ರಿಪೋರ್ಟ್ ಸಲ್ಲಿಸಿರುವುದರಿಂದ ನನಗೆ ಅನ್ಯಾಯವಾಗಿದೆ. ನನ್ನ ಮಗ ಪರೇಶ್ ಮೇಸ್ತನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿತ್ತು. ಬಹುತೇಕ ಸಾಕ್ಷಾಧಾರಗಳು ನಾಶವಾಗಿತ್ತು. ಹೀಗಾಗಿ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಮನವಿ ಮಾಡಿಕೊಂಡರು.
ಪರಮೇಶ್ ಮೇಸ್ತಾ ತಂದೆ ಕಮಾಲಾಕರ್ ಮೇಸ್ತ ಅವರ ಮನವಿಯನ್ನು ಆಲಿಸಿದ ಸಿಎಂ ಬೊಮ್ಮಾಯಿ, “ನಿಮ್ಮನೋವು ಹಾಗೂ ಪರಿಸ್ಥಿತಿಯನ್ನು ಸರ್ಕಾರ ಅರ್ಥಮಾಡಿಕೊಳ್ಳುತ್ತದೆ. ಶೀಘ್ರವೇ ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ” ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಮತ್ತು ಭಟ್ಕಳ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ, ಕುಮಟಾ ಮಂಡಲದ ನಿಟಕ ಪೂರ್ವ ಅಧ್ಯಕ್ಷ ಕುಮಾರ ಮಾರ್ಕಾಂಡೆ, ಪರೇಶ ಮೇಸ್ತನ ತಮ್ಮನಾದ ರಾಹುಲ್ ಮೇಸ್ತ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ: ನರಸಿಂಹ ನಾಯ್ಕ್ ಹರಡಸೆ
More Stories
ಭಾರತೀಯ ಜನತಾ ಪಾರ್ಟಿಯ ವೃತ್ತಿಪರರ ಪ್ರಕೋಷ್ಠದ ರಾಜ್ಯ ಸಹ-ಸಂಚಾಲಕರನ್ನಾಗಿ ಕೆ.ಆರ್. ವೆಂಕಟೇಶ್ಗೌಡ, ಬೆಂಗಳೂರು, ನೇಮಕ
ಸುವರ್ಣ ಸಾಧಕ ಪ್ರಶಸ್ತಿ ಸ್ವೀಕರಿಸಿದ ಅನಂತಮೂರ್ತಿ ಹೆಗಡೆ
ನ್ಯಾಷನಲ್ ಎಜುಕೇಷನ್ ಸೊಸೈಟಿಯಿಂದ ಡಿ 8 ಮತ್ತು 9 ರಂದು ಎನ್.ಇ.ಎಸ್ ಸೂಪರ್ ನೋವಾ ಒಂದು ಶೈಕ್ಷಣಿಕ ಮೇಳ