April 26, 2024

Bhavana Tv

Its Your Channel

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿoದ 67ನೇ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರು : ಆರವತ್ತೇಳನೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಅವನ್ಯೂ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಲ್ಲಿ ರಾಜ್ಯೋತ್ಸವದ ಅಂಗವಾಗಿ ರಾಜ್ಯಾಧ್ಯಕ್ಷರಾದ ಸಿ. ರಮೇಶರವರು ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸುತ್ತಾ, ನಾವು ನಮ್ಮ ಮನೆಗಳಲ್ಲಿ ಕನ್ನಡದ ಕಂಪನ್ನು ಹೆಚ್ಚಿಸುವ ಮೂಲಕ ಇತರರಿಗೆ ಮಾದರಿಯಾಗಿರಬೇಕು. ಕನ್ನಡದ ಕೆಲಸ ಎಲ್ಲರಿಂದಾಗಬೇಕು.
ರಾಜ್ಯದಲ್ಲಿರುವ ಇತರರಿಗೆ ಕನ್ನಡ ಭಾಷೆಗಳನ್ನು ಕಲಿಸಿ ಕನ್ನಡ ಮಾತನಾಡುವ ಹಾಗೆ ಮಾಡಬೇಕೆಂದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ಚಂದ್ರಬಾಬು,ಕನ್ನಡ ಕ್ರೀಯಾ ಸಮಿತಿ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ,ಡೈರಿ ಸಮಿತಿಯ ಅಧ್ಯಕ್ಷರಾದ ಗೋವಿಂದರಾಜು,ವಿಚಾರಣಾ ಸಮಿತಿ ಉಪಾಧ್ಯಕ್ಷರಾದ ಸಮಿಉಲ್ಲಾ,ಸುಜೆಂದ್ರಾ,ಸುಹೇಲಖಾನ್ ಮುಂತಾದವರು ಉಪಸ್ಥಿತರಿದ್ದರು.

error: